Share this news

ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗೆ ಮಾರ್ಗಸೂಚಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ಇಂದು ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಜಾರಿಗೊಳಿಸಿ, ಆಡಳಿತಾತ್ಮಕ ಅನುಮೋದನೆಯ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ.ವಿಎಸ್ ಅವರು ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಟಾಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಲಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ( ವಿದ್ಯಾರ್ಥಿನಿಯರು ಸೇರಿದಂತೆ ) ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ( ಎಸಿ ಬಸ್ ಮತ್ತು ಐಷಾರಾಮಿ) ಬಸ್ ಗಳಲ್ಲಿ ಹೊರತುಪಡಿಸಿ ಉಚಿವಾಗಿ ಪ್ರಯಾಣಿಸಲು ಅವಕಾಶ ನೀಡಿರುತ್ತದೆ ಎಂದು ಹೇಳಿದ್ದಾರೆ.

ಈ ಪ್ರಸ್ತಾವನೆ ಹಿನ್ನಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಕರ್ನಾಟಕ ರಾಜ್ಯಾಧ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ( ವಿದ್ಯಾರ್ಥಿನಿಯರು ಸೇರಿದಂತೆ ) ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಈ ಕೆಳಕಂಡ ಷರತ್ತುಗಳೊಂದಿಗೆ ದಿನಾಂಕ 11-06-2023ರಿಂದ ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *