ಹೆಬ್ರಿ: ಅತೀವೇಗವಾಗಿ ಸಾಗುತ್ತಿದ್ದ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ
ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಮೃತಪಟ್ಟವರು. ಅವರು ಭಾನುವಾರ ಮಧ್ಯಾಹ್ನ ಸ್ಕೂಟಿಯಲ್ಲಿ ಮುನಿಯಾಲು ಕಡೆಯಿಂದ ಸೂರಿಮಣ್ಣು ಕಡೆಗೆ ಹೋಗುತ್ತಿದ್ದಾಗ ವರಂಗ ಗ್ರಾಮದ ಮಾತಿಬೆಟ್ಟು ಹಾಲಿನ ಡೈರಿ ತಿರುವಿನಲ್ಲಿ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪ್ರಭಾಚಂದ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

