ಹೆಬ್ರಿ: ಅಖಿಲ ಭಾರತ ವಿದ್ಯಾಭಾರತಿ ಸಂಬAಧಿತ ಕ್ಷೇತ್ರೀಯ ಮಟ್ಟದ ವಿಜ್ಞಾನ ಪ್ರದರ್ಶನವು ಇತ್ತೀಚೆಗೆ ವಿಜಯವಾಡದಲ್ಲಿ ನಡೆಯಿತು. ಇದರಲ್ಲಿ ಕರ್ನಾಟಕದಿಂದ ಆಯ್ಕೆಯಾದ ಹೆಬ್ರಿ ಅಮೃತಭಾರತಿ ವಿದ್ಯಾಲಯದ 10ನೇ ತರಗತಿಯ ಪ್ರಣಮ್ ಮತ್ತು ಪವನ್ ಹೆಬ್ಬಾರ್, ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳ ಮೇಲ್ವಿಚಾರಕರಾದ ನೆಂಚಾರು ಗಣೇಶ ಅಡಿಗ ಮತ್ತು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಮತ್ತು ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.