Share this news

ಕಾರ್ಕಳ :ಶ್ರೀ ಸತ್ಯದೆಕ್ಕಿ ಧರ್ಮರಸು ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಹಾಗೂ ಮಾಯಾಂದಾಲೆ ದೇವಿ ಜೋಡುಗರಡಿ ಸಾಣೂರು ಮೇ ತಿಂಗಳಲ್ಲಿ ಜೀರ್ಣೋದ್ದಾರ ಕಾರ್ಯವು ನಡೆದಿದ್ದು, ಆ ಪ್ರಯುಕ್ತ ಗುರುವಾರ ಶ್ರೀ ಕ್ಷೇತ್ರದಲ್ಲಿ ಸಾಣೂರು ದೆಂದಬೆಟ್ಟು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಾಮ್ ಭಟ್ ಇವರ ನೇತೃತ್ವದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ದೃಢ ಸಂಪ್ರೋಕ್ಷಣೆ, ಸಾನಿಧ್ಯ ಕಳಶಾಭಿಷೇಕ ಮತ್ತು ಪ್ರಸನ್ನ ಪೂಜಾ ಕಾರ್ಯಕ್ರಮ ಹಾಗೂ ಪಾತ್ರಿ ದರ್ಶನ ಸೇವೆಯು ಶ್ರೀ ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹಾಗೂ ಕಾಂಗ್ರೆಸ್ ಮುಖಂಡ ಮೋಹನ್ ಕುಮಾರ್ ಅವರನ್ನು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಮಿಥುನ್ ರೈ ಇಡೀ ಊರಿನವರು ಮೆಚ್ಚುವಂತಹ ಜೀರ್ಣೋದ್ಧಾರ ಕಾರ್ಯವು ಜಗದೀಶ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆದಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳು ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *