ಕೊಪ್ಪಳ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದಾದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಪಕ್ಷವಾದ ಕೆಆರ್ ಪಿಪಿ ಪಕ್ಷವು ಬೆಂಬಲ ಘೋಷಿಸಲಿದೆ ಎಂದು ಹೇಳಿದ್ದಾರೆ.
ಗಂಗಾವತಿಯಲ್ಲಿ ಇಂದು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ನಂತರ ಕೆಆರ್ ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಅವಶ್ಯಕತೆ ಇದ್ದು, ಕಾಂಗ್ರೆಸ್ ಪಕ್ಷ ಬೆಂಬಲಿಸಲು ಕೇಳಿದರೆ, ಸಿದ್ದರಾಮಯ್ಯ ಸಿಎಂ ಆಗುವ ಸಂದರ್ಭ ಇದ್ದರೆ ಖಂಡಿತವಾಗಿ ನಾನು ಅವರಿಗೆ ಬೆಂಬಲ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.
ಜನಾರ್ಧನ ರೆಡ್ಡಿ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ರೆಡ್ಡಿ ಈಗಾಗಲೇ ಬಿಜೆಪಿ ಜತೆ ಮುನಿಸಿಕೊಂಡಿದ್ದು ಇದರಿಂದ ಬೇಸತ್ತು ಪ್ರತ್ಯೇಕ ಪಕ್ಷ ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ಉತ್ಸಾಹದಲ್ಲಿದ್ದಾರೆ