Share this news

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಶನಿವಾರ ನಡೆಯಿತು.
ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಮಾತನಾಡಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಪ್ರತಿಭೆಯನ್ನು ತೋರಿಸಲು ಸಾಧ್ಯ. ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಬೇಕು ಎಂದು ತಿಳಿಸಿದರು.
ಮುಖ್ಯಅತಿಥಿಗಳಾದ ಬೆಳ್ಮಣ್ ಮತ್ತು ಹೆಬ್ರಿ ವಲಯದ ಶಿಕ್ಷಣ ಸಂಯೋಜಕ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಕೆಲವೊಂದು ವಿದ್ಯಾಸಂಸ್ಥೆಗಳು ಮಾತ್ರ ಪಠ್ಯೇತರ ಚಟುವಟಿಕೆಗಳನ್ನು ಅಳವಡಿಸಿಕೊಂಡಿವೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅಮೃತಭಾರತಿ ಟ್ರಸ್ಟ್ ನ ಸದಸ್ಯರಾದ ವಿಷ್ಣುಮೂರ್ತಿ ನಾಯಕ್, ಲಕ್ಷ್ಮಣ್ ಭಟ್, ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕ್ರೀಡಾ ವಿಶೇಷ ತರಬೇತಿಯನ್ನು ನೀಡಿದ ಪ್ರಸನ್ನ ದೇವಾಡಿಗ ಮತ್ತು ಸೂರ್ಯಕುಮಾರ್ ಇವರನ್ನು ಗೌರವಿಸಲಾಯಿತು.
ಈ ಕಾರ್ಯಕ್ರಮವನ್ನು ಪ್ರೌಢಶಾಲೆಯ ಮೀನಾಕ್ಷಿ ಸ್ವಾಗತಿಸಿ, .ಪ್ರಾಥಮಿಕ ವಿಭಾಗದ ಪ್ರೇಮಲತಾ ವಂದಿಸಿ, ಪ್ರಾಥಮಿಕ ವಿಭಾಗದ ಮೀನಾಕ್ಷಿ ನಿರೂಪಿಸಿದರು.

 

Leave a Reply

Your email address will not be published. Required fields are marked *