Share this news

ಕಾರ್ಕಳ: ಕ್ರಿಯೇಟಿವ್ ಪುಸ್ತಕಮನೆ ಕಾರ್ಕಳದ ಸಾಹಿತ್ಯಾಸಕ್ತರಿಗೆ, ಸಾಹಿತ್ಯದ ಅಭಿರುಚಿಯುಳ್ಳವರಿಗೆ ಉತ್ತಮ ಸೇವೆಯನ್ನು ಒದಗಿಸುತ್ತ ಬರುತ್ತಿದೆ. ಇದೀಗ ಸಾಹಿತ್ಯದ ಮತ್ತೊಂದು ಹೊಸಹೆಜ್ಜೆ ಎಂಬಂತೆ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ನಾಡಿನ ಪ್ರಖ್ಯಾತ ಬರಹಗಾರರ 15 ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ಜು.1 ರಂದು ಬೆಳಿಗ್ಗೆ 11.30ಕ್ಕೆ ಕಾಲೇಜಿನ ಸಪ್ತಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಕ್ರಿಯೇಟಿವ್ ಸಂಸ್ಥೆಯ ಸಂಸ್ಥಾಪಕ ಅಶ್ವಥ್ ಎಸ್.ಎಲ್ ತಿಳಿಸಿದರು.

ಅವರು ಇಂದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಬರಹಗಾರ ಗಿರೀಶ್ ರಾವ್ ಹತ್ವಾರ್ (ಜೋಗಿ) ಭಾಗಿಯಾಗಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಶಾಸಕ ಸುನಿಲ್ ಕುಮಾರ್, ಕ.ಸಾ.ಪ. ಕಾರ್ಕಳ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ರಿಯೇಟಿವ್ ಸಂಸ್ಥಾಪಕರಾದ ಗಣನಾಥ ಶೆಟ್ಟಿ, ಗಣಪತಿ ಕೆ.ಎಸ್, ಪಿಆರ್‌ಒ ಲಿಶಾನ್, ಉಪನ್ಯಾಸಕ ರಾಘವೇಂದ್ರ ಅನುಬೆಳ್ಳೆ ಉಪಸ್ಥಿತರಿದ್ದರು.

 

 

                        

                          

 

 

 

 

 

                        

                          

 

 

 

 

Leave a Reply

Your email address will not be published. Required fields are marked *