Share this news

ಕಾರ್ಕಳ,ಸೆ.20:ವಿದ್ಯಾಭಾರತಿ ಉಡುಪಿ ಜಿಲ್ಲೆ ಹಾಗೂ ಮಾಳ ಗುರುಕುಲ ವಿದ್ಯಾವರ್ಧಕ ಸಂಘದ ವತಿಯಿಂದ 19ನೇ ಜಿಲ್ಲಾ ಶೈಕ್ಷಣಿಕ ಸಹಮಿಲನ್ ಕಾರ್ಯಕ್ರಮ- 2026 ಕಾರ್ಯಕ್ರಮವು ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.19ರಂದು ಶನಿವಾರದಂದು ನಡೆಯಿತು.
ಮೂಡುಬಿದಿರೆಯ ವೈಬ್ರೆಂಟ್ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಡಾ. ಶರತ್ ಗೋರೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾ ಭಾರತೀಯ ಉಡುಪಿ ವಿಭಾಗದ ಅಧ್ಯಕ್ಷರಾದ ಪಾಂಡುರAಗ ಪೈ ಸಿದ್ಧಾಪುರ ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ನಾಗಭೂಷಣ ಜೋಶಿ, ವಿದ್ಯಾ ಭಾರತೀಯ ಉಪ ಖಜಾಂಚಿ ಟಿ ನಾಗರತ್ನ, ಪ್ರತ್ಯಕ್ಷ ಸುರೇಶ್, ಶಾಲಾ ಸಂಚಾಲಕ ಸುಧಾಕರ ಡೊಂಗ್ರೆ, ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಶೆಣೈ, ವಿದ್ಯಾಭಾರತಿ ಉಡುಪಿ ಜಿಲ್ಲೆಯ ಕಾರ್ಯದರ್ಶಿ ಮಹೇಶ್ ಹೈಕಾಡಿ,ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವಿವಿಧ ಅವಧಿಗಳಲ್ಲಿ ಬೋಧಕ ಬೋಧಕೇತರ ವರ್ಗ ಮತ್ತು ಆಡಳಿತ ವರ್ಗದವರಿಗೆ ವಿವಿಧ ಬೌದ್ಧಿಕ ಕಾರ್ಯಕ್ರಮಗಳು ನಡೆದವು ಕ್ರಿಯೇಟಿವ್ ಕಾಲೇಜಿನ ಶ್ರೀ ಅಶ್ವಥ್ ಎಸ್. ಎಲ್, ಕೃಷ್ಣಮೂರ್ತಿ ಹೈಕಾಡಿ, ಮತ್ತು ಶ್ರೀಮತಿ ಪ್ರತ್ಯಕ್ಷ ಸುರೇಶ್ ಇವರು ವಿವಿಧ ವಿಭಾಗಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಆಡಳಿತ ಮಂಡಳಿಯವರು,ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಭಾಗವಹಿಸಿದ್ದರು.
ಹಿರಿಯ ಶಿಕ್ಷಕಿ ಶೋಭಾ ಇವರು ನಿರೂಪಿಸಿ, ಪೂರ್ಣಿಮಾ ಶೆಣೈ ಸ್ವಾಗತಿಸಿ, ಶ್ರೀ ಸುಧಾಕರ ಡೋಂಗ್ರೆ ವಂದನಾರ್ಪಣೆಗೈದರು.
ಉಡುಪಿ ಜಿಲ್ಲೆಯ ಸುಮಾರು 34 ವಿದ್ಯಾಸಂಸ್ಥೆಗಳಿAದ ಮುನ್ನೂರಕ್ಕೂ ಹೆಚ್ಚಿನ ಶಿಕ್ಷಕರು ಮತ್ತು ಬೋಧಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗಜಾನನ ಮರಾಠೆ, ಟಿ.ನಾಗರತ್ನ, ವಿದ್ಯಾಭಾರತಿ ಜಿಲ್ಲಾಧ್ಯಕ್ಷ ಪಾಂಡುರAಗ ಪೈ, ನಿಟ್ಟೆ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ ಚಿಪ್ಲೂಣ್ಕರ್, ಆಡಳಿತ ಮಂಡಳಿ ಸದಸ್ಯ ರಾಮ ಸೇರಿಗಾರ್, ವಿದ್ಯಾ ಭಾರತಿ ಕಾರ್ಯದರ್ಶಿ ಮಹೇಶ್ ಹೈಕಾಡಿ, ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು. ಈ ಕಾರ್ಯಕ್ರಮಗಳಲ್ಲಿ ಜಿಲ್ಲಾ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಗೌರವಿಸಲಾಯಿತು.

ವಿದ್ಯಾ ಭಾರತಿ ಪ್ರಾರ್ಥನಾ ಗೀತೆ ಆಧಾರಿತ ನೃತ್ಯ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಅಮೃತ ಭಾರತಿ ಹೆಬ್ರಿ ಹಾಗೂ ಮಾಳ ಗುರುಕುಲ ಪ್ರಾಥಮಿಕ ಶಾಲೆಯು ದ್ವಿತೀಯ ಸ್ಥಾನ ಪಡೆಯಿತು. ರಾಮಪ್ಪ ಶಾಲೆ, ಕಾರ್ಕಳ ತೃತೀಯ ಸ್ಥಾನ ಪಡೆಯಿತು. ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ರಾಮ ಸೇರಿಗಾರ್ ಇವರು ಸ್ವಾಗತಿಸಿ, ಶ್ರೀ ಮಹೇಶ್ ಹೈಕಾಡಿ ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿದರು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಾಗಭೂಷಣ ಮರಾಠೆ ಅತಿಥಿಗಳಿಗೆ ಸಿಹಿತಿಂಡಿಯ ಗಿಫ್ಟ್ ಪ್ಯಾಕ್ ವ್ಯವಸ್ಥೆಯನ್ನು ಮಾಡಿದ್ದರು ಕ್ರಿಯೇಟಿವ್ ಸಂಸ್ಥಾಪಕ ಅಶ್ವಥ್ ಮತ್ತು ನೀಲೇಶ್ ಮಾಳ ಇವರು ಆಧ್ಯಾಪಕರಿಗೆ ನೋಟ್ ಪ್ಯಾಡ್ ಮತ್ತು ಪೆನ್ ಗಳನ್ನು ಪ್ರಾಯೋಜಿಸಿದ್ದರು ಆಡಳಿತ ಮಂಡಳಿಯ ಸದಸ್ಯರು ಶಿಕ್ಷಕ ವೃಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

 

 

 

 

     

.

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *