Share this news

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೇತುವೆ ಸಹಿತ ನೂತನ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸರಕಾರದಿಂದ 2.80 ಕೋಟಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ‌. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಸಾಂತಕ್ಯಾರು ಮೂಲ್ದೂಟ್ಟು ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 02.00 ಕೋ.ರೂ, ಮಾಳ ಗ್ರಾಮದ ಅಚ್ಚು ಪೂಜಾರಿ ಮನೆ ಬಳಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 30.00 ಲಕ್ಷ ಅನುದಾನ, ಹಾಗೂ ನಿಟ್ಟೆ ಗ್ರಾಮದ ಬೆರಂದೊಟ್ಟು ಗರಡಿ ಬಳಿಯ ತೊಯ್ಪಲಕಟ್ಟೆ ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 50.00 ಲಕ್ಷ ಅನುದಾನ ಸೇರಿದಂತೆ ಒಟ್ಟು 02.80 ಕೋ. ರೂ ಮೊತ್ತದ ಕಾಮಗಾರಿಗಳಿಗೆ ಸರಕಾರದ ಅನುಮೋದನೆ ದೊರೆತಿದೆ.
ಶಾಸಕ ಸುನಿಲ್ ಕುಮಾರ್ ಅವರ ಶಾಸಕತ್ವದ ಎರಡು ಅವಧಿಯಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಬರೋಬ್ಬರಿ 56 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದೆ. ಇದೀಗ ಸುನಿಲ್ ಕುಮಾರ್ ಭಗೀರಥ ಪ್ರಯತ್ನ ಎಂಬಂತೆ ಸರ್ಕಾರದ ಮೇಲೆ ನಿರಂತರ ಒತ್ತಡ ಹಾಕಿ ನೀರಾವರಿ ಕ್ಷೇತ್ರಕ್ಕೆ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಆದಷ್ಟು ಬೇಗ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದೆಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

 

 

 

 

Leave a Reply

Your email address will not be published. Required fields are marked *