ಮುಂಬೈ: ಮುಂಬೈನಲ್ಲಿ 2006ರಲ್ಲಿ ಸಂಭವಿಸಿದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಾಂಬೆ ಹೈಕೋರ್ಟ್ ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿ ಅನಿಲ್ ಕಿಲೋರ್ ಮತ್ತು ನ್ಯಾಯಮೂರ್ತಿ ಎಸ್.ಜಿ. ಚಂದಕ್ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಒಟ್ಟು 12 ಆರೋಪಿಗಳನ್ನು ಈ ಹಿಂದೆ ಕೆಳ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿತ್ತು, ಅದರಲ್ಲಿ 5 ಜನರಿಗೆ ಮರಣದಂಡನೆ ಮತ್ತು 7 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆ ನಂತರ ಹೈಕೋರ್ಟ್ನಲ್ಲಿ ವಿಚಾರಣೆಯ ಸಮಯದಲ್ಲಿ, 11 ಆರೋಪಿಗಳನ್ನು ಖುಲಾಸೆಗೊಳಿಸಲಾಯಿತು, ಒಬ್ಬ ಆರೋಪಿ ಈಗಾಗಲೇ ಮೃತಪಟ್ಟಿದ್ದಾನೆ.
2006ರ ಜುಲೈ 11ರಂದು ಮುಂಬೈ ರೈಲುಗಳಲ್ಲಿ ಸಂಭವಿಸಿದ ಸರಣಿ ಸ್ಫೋಟಗಳಲ್ಲಿ 188ಮಂದಿ ಬಲಿಯಾಗಿದ್ದರು. ಕಮಲ್ ಅಹ್ಮದ್ ಅನ್ಸಾರಿ (37), ತನ್ವೀರ್ ಅಹ್ಮದ್ ಅನ್ಸಾರಿ (37), ಮೊಹಮ್ಮದ್ ಫೈಸಲ್ ಶೇಕ್ (36), ಇತೇಶಂ ಸಿದ್ದಿಕಿ (30), ಮೊಹಮ್ಮದ್ ಮಾಜಿದ್ ಶಫಿ (32), ಶೇಕ್ ಅಲಾಂ ಶೇಕ್ (41), ಮೊಹಮ್ಮದ್ ಸಾಜಿದ್ ಅನ್ಸಾರಿ (34), ಮುಜಾಮಿಲ್ ಶೇಕ್ (27), ಸೋಹಿಲ್ ಮೊಹಮ್ಮದ್ ಶೇಕ್ (43), ಜಮೀರ್ ಅಹ್ಮದ್ ಶೇಕ್ (36), ನಾವೆದ್ ಹುಸೇನ್ ಖಾನ್ (30) ಮತ್ತು ಆಸಿಫ್ ಖಾನ್ (38) ಆರೋಪಿಗಳು.
2006 ರಲ್ಲಿ ನಡೆದ ಈ ಬಾಂಬ್ ಸ್ಫೋಟದಲ್ಲಿ, ಮುಂಬೈನ ಸ್ಥಳೀಯ ರೈಲುಗಳಲ್ಲಿ ಏಳು ಸ್ಥಳಗಳಲ್ಲಿ ಸ್ಫೋಟಗಳು ಸಂಭವಿಸಿದವು, ಇದರಲ್ಲಿ 189 ಜನರು ಪ್ರಾಣ ಕಳೆದುಕೊಂಡರು ಮತ್ತು ನೂರಾರು ಜನರು ಗಾಯಗೊಂಡಿದ್ದರು.
ಚರ್ಚ್ಗೇಟ್ನಿಂದ ಬೊರಿವೆಲಿಯೆಡೆಗೆ ತೆರಳುತ್ತಿದ್ದ ಸಬ್ಅರ್ಬನ್ ರೈಲಿನ ಪ್ರಥಮ ದರ್ಜೆ ಬೋಗಿಯಲ್ಲಿ ಸಂಜೆ 6.20ಕ್ಕೆ ಮೊದಲ ಸ್ಫೋಟ. ಇದಾದ ಕೆಲವೇ ಸಮಯದಲ್ಲಿ ಸ್ಫೋಟಗೊಂಡ 6 ಸ್ಫೋಟಗಳು ಸಂಭವಿಸಿದ್ದು, 189 ಜನರು ಪ್ರಾಣ ಕಳೆದುಕೊಂಡಿದ್ದರೆ, 800 ಮಂದಿ ಗಾಯಗೊಂಡಿದ್ದರು.
