ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದಾರೆ. ಇದು ಅವರ ಪೊಲಿಟಿಕಲ್ ಕರೀಯರ್ ನ ಮಹತ್ವದ ದಿನಗಳಲ್ಲಿ ಒಂದು. ಬಜೆಟ್ ಪುಸ್ತಕದೊಂದಿಗೆ ಬೊಮ್ಮಾಯಿ ವಿಧಾನ ಸೌಧಕ್ಕೆ ಆಗಮಿಸುವ ಮೊದಲು ಕರ್ನಾಟಕ ಜನತೆಯ ಪರವಾಗಿ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಅರ್ಚನೆ ಮಾಡಿಸಿದ್ದಾರೆ.
ಅವರು ಇಂದು 2023-24ನೇ ಸಾಲಿನ ಅಯವ್ಯಯವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ಇಂದು ಅವರು ಮಂಡಿಸಿದ ಬಜೆಟ್ ಗಾತ್ರ 3,03,910 ಕೋಟಿ ಗಾತ್ರದ ಒಟ್ಟು ವೆಚ್ಚ 2,89,653 ಆಗಿದೆ. ಕೆಳೆದ ಬಾರಿಗಿಂತ ಈ ಬಾರಿ ಶೇ.9ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ಅಲ್ಲದೇ 35 ಸಾವಿರ ಕೋಟಿ ಅಬಕಾರಿ ಸಂಗ್ರಹದ ಗುರಿ ಹೊಂದಿದ್ದರೇ, ಸಾರಿಗೆ ಇಲಾಖೆಯಿಂದ 10,500 ಕೋಟಿ ಗುರಿ ಸೇರಿದಂತೆ 6,500 ಕೋಟಿ ರಾಜಸ್ವ ಸಂಗ್ರಹದ ಗುರಿಯನ್ನು ಹೊಂದಿದೆ.
ಹೀಗಿದೆ ಇಂದಿನ ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ ಹೈಲೈಟ್ಸ್
- ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸೂರಕವಾಗಿ Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.
- ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿ.ಇ.ಎಲ್ ರಸ್ತೆಯ ವರೆಗೆ Integrated ಮೇಲ್ವೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು.
- 1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು,
- ಬಿಬಿಎಂಪಿಗೆ ಸೇರ್ಪಡೆಯಾದ 10 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 300 ಒದಗಿಸಲಾಗುವುದು. ಕೋಟಿ ರೂ.
- ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು 300 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
- ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀ.ಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ, 58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೊಜಿಸಲಾಗಿದೆ.
- ಹಿಂದಿನ ಆಯವ್ಯಯದಲ್ಲಿ ಮೆಟ್ರೋ ಜಾಲದ 3ನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 44.65 ಕಿ.ಮೀ. ಉದ್ದದ 31 ನಿಲ್ದಾಣಗಳನ್ನು ಒಳಗೊಂಡಂತೆ 2 ಮಾರ್ಗಗಳ ವಿಸ್ತ್ರತ ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇದಕ್ಕೆ 16,328 ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ.
- ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ. ಉದ್ದದ Satellite Town Ring Road ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.
- ಉಪನಗರ ರೈಲ್ವೆ ಯೋಜನೆಗೆ (BSRP) ರಾಜ್ಯ ಸರ್ಕಾರ ಮತ್ತು ಅನುಷ್ಠಾನಗೊಳಿಸಲು ಹಸಿರು ನಿಶಾನೆ ನೀಡಿವೆ.
- ಬೆಂಗಳೂರು ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಬೆಂಗಳೂರು ರೈಲ್ವೆ ಮಂತ್ರಾಲಯವು 15,767 ಕೋಟಿ ರೂ. ವೆಚ್ಚದಲ್ಲಿ ಮೊದಲನೇ ಹಂತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, 2024-25ನೆ ವರ್ಷದಲ್ಲಿ ಯೋಜನೆಯ ಪೂರ್ಣಗೊಳಿಸಲಾಗುವುದು, ಈ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 1,350 ಕೋಟಿ ರೂ. ಗಳು ಹಾಗೂ ರಾಜ್ಯ ಸರ್ಕಾರದಿಂದ 1,000 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.
- ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರಿಗೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಹಲವಾರು ಸಂಸ್ಥೆಗಳ ಕಾರ್ಯಾಚರಣೆಯನ್ನು ಸಮನ್ವಯಿಸಲು ಉನ್ನತಾಧಿಕಾರದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರವನ್ನು ರಚಿಸಲಾಗಿದೆ.
- ಹವಾಮಾನ ಬದಲಾವಣೆಯ ಪರಿಣಾಮವನ್ನು ಕಡಿಮೆ ಮಾಡಲು ಮತ್ತು ಬೆಂಗಳೂರಿನಲ್ಲಿ ಪ್ರವಾಹವನ್ನು ನಿಯಂತ್ರಿಸಲು 3,000 ಕೋಟಿ ರೂ. ಗಳ ಯೋಜನೆಯನ್ನು ವಿಶ್ವಬ್ಯಾಂಕ್ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯಡಿಯಲ್ಲಿ ಪ್ರವಾಹ ಎಲ್ಲಾ Sluice Gateಗಳನ್ನು ಅಳವಡಿಸಲಾಗುವುದು. ಇದರಿಂದ ನೀರಿನ ಹರಿವಿನ ವೇಗ ಮತ್ತು ಪ್ರಮಾಣವನ್ನು ನಿಯಂತ್ರಿಸಲುಅನುಕೂಲವಾಗಿದೆ.
- ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿಗಳನ್ನು 5,550 ಕೋಟಿ ರೂ. ಅಂದಾಜು ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ತೆಗೆದುಕೊಂಡಿದ್ದು, ಎಲ್ಲ ಕಾಮಗಾರಿಗಳು 2023-245 ಸಾಲಿನಲ್ಲಿ ವೆಚ್ಚದಲ್ಲಿ ಜೈಕಾ ಗೊಳಿಸಲಾಗುವುದು.
- ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು ಅನುಷ್ಠಾನಗೊಳಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ರಾಜ್ಯ ಸರ್ಕಾರದ ವತಿಯಿಂದ 200 ಕೋಟಿ ರೂ. ಆರ್ಥಿಕ ನೆರವು ನೀಡಲಾಗುವುದು.
- ಪ್ರಸ್ತುತ ಬೆಂಗಳೂರು ನಗರದಲ್ಲಿ 1,850 ಎಂ.ಎಲ್.ಡಿ. ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು, ಇದರಲ್ಲಿ 1,500 ಎಂ.ಎಲ್.ಡಿ. ತ್ಯಾಜ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು ಸೃಜಿಸಲಾಗಿದೆ. ಹೆಚ್ಚುವರಿಯಾಗಿ 350 ಎಂ.ಎಲ್.ಡಿ. ಸಾಮರ್ಥ್ಯವನ್ನು ಒದಗಿಸುವುದರೊಂದಿಗೆ ಸಂಪೂರ್ಣ ತ್ಯಾಜ್ಯ ನೀರನ್ನು ಸಂಸ್ಕರಿಸಲಾಗುವುದು.
- ಮೆಗಾಸಿಟಿ ರಿವಾಲ್ವಿಂಗ್ ನಿಧಿಯಡಿ ದಿನಂಪ್ರತಿ ಒಟ್ಟು 440 ದಶಲಕ್ಷ ಲೀಟರ್ ತ್ಯಾಜ್ಯನೀರಿನ ಸಂಸ್ಕರಣಾ ಸಾಮರ್ಥ್ಯದ ನಾಲ್ಕು ಹೊಸ ಘಟಕಗಳ ಕಾಮಗಾರಿಗಳನ್ನು 1,200 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗಿದೆ.
- ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರುಗಳು ಕಾಂಪಾಕ್ಟರುಗಳು ಕಾರ್ಯಾಚರಣೆ ಮಾಡಲಿವೆ. ಆಯಾ ವಾರ್ಡ್ ಗಳಲ್ಲಿಯೇ ತ್ಯಾಜ್ಯ ಸಂಸ್ಕರಣೆ ಮಾಡಲು ಪ್ರತಿ ವಾರ್ಡ್ಗೆ ಒಂದರಂತೆ ಆಧುನಿಕ ತಂತ್ರಜ್ಞಾನ ಆಧಾರಿತ ವಾಸನೆರಹಿತ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
- ವಾಣಿಜ್ಯ ಮಳಿಗೆಗಳು, ಆಸ್ಪತ್ರೆಗಳು, ಹೋಟೆಲ್ಗಳು ಸೇರಿದಂತೆ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮ ಹಂತದಲ್ಲಿಯೇ ತ್ಯಾಜ್ಯವನ್ನು ಸಂಸ್ಕರಿಸುವುದನ್ನು ಕಡ್ಡಾಯಗೊಳಿಸುವ ಮೂಲಕ ಸ್ಥಳೀಯವಾಗಿಯೇ ತ್ಯಾಜ್ಯ ಸಂಸ್ಕರಣೆಗೆ ಒತ್ತು ನೀಡಲಾಗುವುದು.
- ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್ (Smart Virtual Clinic ಗಳನ್ನು ಅನುಮೋದಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ. ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು ಬೆಂಗಳೂರು ಹೆಲ್ತ್ ಸಿಸ್ಟಮ್ಸ್ ಎಂದು ಪುನರ್ ರಚನೆ ಮಾಡಲು ಉದ್ದೇಶಿಸಲಾಗಿದೆ.
- 2022-233e ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿದ್ದ 20 ಬೆಂಗಳೂರು ಪಬ್ಲಿಕ್ ಶಾಲೆಗಳನ್ನು ಕಾರ್ಯಗತಗೊಳಿಸಲಾಗಿದೆ. ಮುಂದುವರೆದು, ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗಾಗಿ 180 ಕೋಟಿ ರೂ. ಗಳ ವೆಚ್ಚದಲ್ಲಿ ಯೋಜನೆಗಳನ್ನು ತಯಾರಿಸಿದ್ದು, ಕಾಮಗಾರಿಗಳನ್ನು ಗೊಳಿಸಲಾಗುವುದು. 2023-24 ನೇ – ಸಾಲಿನಲ್ಲಿ ಸದರಿ ಪೂರ್ಣ.
- ಬೆಂಗಳೂರಿನಲ್ಲಿ 2022-23 ರವರೆಗೆ, ಪ್ರತಿ ವರ್ಷ ಸುಮಾರು 10 ಲಕ್ಷ ಸಸಿಗಳನ್ನು ನೆಡಲಾಗಿದೆ. 2023-24 ರಿಂದ ಇದನ್ನು ವರ್ಷಕ್ಕೆ 15 ಲಕ್ಷ ಸಸಿಗಳಿಗೆ ಹೆಚ್ಚಿಸಲಾಗುವುದು ಮತ್ತು ಅರಣ್ಯ ಇಲಾಖೆಯ ಸಹಕಾರದೊಂದಿಗೆ 3 ಹೊಸ ಹೈಟೆಕ್ ನರ್ಸರಿಗಳನ್ನು – ಸ್ಥಾಪಿಸಲು ಉದ್ದೇಶಿಸಿದೆ.
- ಬಿಬಿಎಂಪಿ ಆಸ್ತಿಗಳ ಒತ್ತುವರಿ ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ, ಬೋರ್ಡ್ಗಳ ಅಳವಡಿಕೆ ಮತ್ತು GPS ತಂತ್ರಾಂಶದ ಮುಖಾಂತರ ಕಣ್ಣಾವಲು ಕ್ರಮ ಕೈಗೊಳ್ಳಲಾಗುವುದು.
- ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ ‘The Safe City Project’ ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಯೋಜನೆಯಡಿಯಲ್ಲಿ 1,640 ಸ್ಥಳಗಳಲ್ಲಿ 4,100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಕ್ಯಾಮರಾಗಳನ್ನು Integrated Control and Command Centreಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ ಮೇಲೆ ನಿಗಾವಹಿಸಲಾಗುತ್ತಿದೆ. * ಈ ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸುವ ಸಲುವಾಗಿ 261 ಕೋಟಿ ರೂ. ಅನುದಾನವನ್ನು ನೀಡಲಾಗುವುದು.
- ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ . ‘She Toilet’ ಗಳನ್ನು ನಿರ್ಮಿಸಲಾಗುವುದು. ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು.
- ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ. ಗಳ ಅನುದಾನ ಒದಗಿಸಿದೆ.
- ಕರ್ನಾಟಕ ರಾಜ್ಯವು ಸಾಂಸ್ಕೃತಿಕವಾಗಿ, ನೈಸರ್ಗಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಈ ಸಂಪನ್ಮೂಲಗಳನ್ನು ಅತ್ಯಂತ ಸಮರ್ಥವಾಗಿ, ಸುಸ್ಥಿರವಾಗಿ ಬಳಸಲು ನಮ್ಮ ಸರ್ಕಾರ ಕಮ ಕೈಗೊಂಡಿದೆ.
- ನ್ಯಾಯಾಂಗ ಕಟ್ಟಡಗಳ ಯೋಜನೆಯಡಿಯಲ್ಲಿ ಕಳೆದ 4 ವರ್ಷಗಳಲ್ಲಿ 580 ಕೋಟಿ ರೂ. ವೆಚ್ಚ ಭರಿಸಿದ್ದು, ಇದರಲ್ಲಿ ರಾಜ್ಯದ ಪಾಲು 397 ಕೋಟಿ ರೂ. ಗಳಾಗಿರುತ್ತದೆ. ಈ ಅವಧಿಯಲ್ಲಿ 39 ನ್ಯಾಯಾಂಗ ಕಟ್ಟಡಗಳನ್ನು ಪೂರ್ಣಗೊಳಿಸಲಾಗಿದೆ. ಹಿಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ನ್ಯಾಯಾಲಯಗಳನ್ನು ಪ್ರಾರಂಭಿಸಲಾಗಿದೆ.
- ಹೊಸದಾಗಿ 83 442. ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು ವಲಯಕ್ಕೆ – 2023-24ನೇ ಸಾಲಿಗೆ 68,585 ಕೋಟಿ ರೂ. ಗಳ ಅನುದಾನ ಒದಗಿಸಿದೆ.
ತೆರಿಗೆ ಪ್ರಸ್ತಾವನೆಗಳು : ವಾಣಿಜ್ಯ ತೆರಿಗೆಗಳು
- ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿಗೊಳಿಸಿ ಸರಳೀಕರಿಸಲು ಉದ್ದೇಶಿಸಿದೆ. ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಳ ಅಥವಾ ಮಜೂರಿಯನ್ನು ಪಡೆವ ನೌಕರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ 15,000 ರೂ. ಗಳಿಂದ 25,000 ರೂ. ಗಳಿಗೆ ಏರಿಕೆ ಮಾಡಲು ಪ್ರಸ್ತಾಪಿಸಿದೆ.
- ವರ್ತಕರ ವ್ಯವಹಾರಗಳ ನಿಖರವಾದ ಪರಿಶೀಲನೆಗಾಗಿ ಮತ್ತು ದತ್ತಾಂಶಗಳ ಸಾಮ್ಯತೆಯನ್ನು ಹೊಂದಲು, ಜಿ.ಎಸ್.ಟಿ PRO ನಿಂದ ಹೊಸ ತಂತ್ರಾಂಶಕ್ಕೆ ಬದಲಾವಣೆ ಮಾಡಲಾಗಿದೆ.
- 2023-24 ನೇ ಸಾಲಿಗೆ ವಾಣಿಜ್ಯ ತೆರಿಗೆಗಳ ಇಲಾಖೆಗೆ 92,000 ಕೋಟಿ ರೂ. ಗಳ (ಜಿ.ಎಸ್.ಟಿ ಪರಿಹಾರ ಹೊರತುಪಡಿಸಿ) ತೆರಿಗೆ ಸಂಗ್ರಹಣೆಯ ಗುರಿಯನ್ನು ನಿಗದಿಪಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ
- ದಿನಾಂಕ 01.01.2022 ರಿಂದ 31.03.2022 ರವರೆಗೆ ಮಾರ್ಗಸೂಚಿ ದರಗಳ ಮೇಲೆ ಶೇ.10 ರಷ್ಟು ರಿಯಾಯಿತಿ ನೀಡಿದ್ದು, ಸದರಿ ಅವಧಿಯಲ್ಲಿ 82,784 ದಸ್ತಾವೇಜುಗಳು ನೋಂದಣಿಯಾಗಿದ್ದು, 4,343 ಕೋಟಿ ರೂ. ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದ್ದು, ಇದು ರಾಜ್ಯದಲ್ಲಿ ಇತಿಹಾಸದಲ್ಲಿಯೇ ಮೂರು ತಿಂಗಳ ಅವಧಿಯಲ್ಲಿ ದಾಖಲೆ ರಾಜಸ್ವ ಸಂಗ್ರಹಣೆಯಾಗಿರುತ್ತದೆ.
- ಮತ್ತೊಮ್ಮೆ ಮಾರ್ಗಸೂಚಿ ದರಗಳ ಮೇಲೆ ಶೇ.10 ರಷ್ಟು ರಿಯಾಯಿತಿ ದಿನಾಂಕ:24.04.2022 ರವರೆಗೆ ವಿಸ್ತರಿಸಿದ್ದು, ಸದರಿ do 27.07.2022 ಅವಧಿಯಲ್ಲಿ 1,73,937 ದಸ್ತಾವೇಜುಗಳು ನೋಂದಣಿಯಾಗಿದ್ದು, 4,018.66 ಕೋಟಿ ರೂ. ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದೆ.
- 2022-23ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಆಯವ್ಯಯದಲ್ಲಿ 15,000 ಕೋಟಿ ರೂ. ಗಳ ಗುರಿ ನೀಡಲಾಗಿದ್ದು, ವರ್ಷಾಂತ್ಯಕ್ಕೆ ಗುರಿ ಮೀರಿ 17,000 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಮಾಡಲಿದ್ದೇವೆ. ಇದು ಆಯವ್ಯಯ ಅಂದಾಜಿಗಿಂತ ಶೇ.13 ರಷ್ಟು ಹೆಚ್ಚಾಗಿರುತ್ತದೆ.
- 2023-24ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 19,000 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಅಬಕಾರಿ
- ಸಾರಾಯಿ/ಸೇಂದಿಗೆ ಸಂಬಂಧಪಟ್ಟ ಅಬಕಾರಿ ಬಾಕಿಗಳನ್ನು ವಸೂಲು ಮಾಡುವುದಕ್ಕಾಗಿ, ನಾನು, ನೂತನ ಕರಸಮಾಧಾನ ಯೋಜನೆಯನ್ನು ರೂಪಿಸಲು ಪ್ರಸ್ತಾಪಿಸುತ್ತೇನೆ. ಸದರಿ ಯೋಜನೆಯಡಿ ಸಾರಾಯಿ ಸೇಂದಿಗೆ ಬಾಡಿಗೆಗಳ ಸಂಬಂಧದಲ್ಲಿ ಮೂಲಧನವನ್ನು ದಿನಾಂಕ:30.06.2023 ಅದಕ್ಕೂ ಮುಂಚಿತವಾಗಿ ಅಥವಾ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ನೀಡಲಾಗುವುದು.
- 2022-23ನೇ ಸಾಲಿಗೆ ಅಬಕಾರಿ ಇಲಾಖೆಗೆ ಆಯವ್ಯಯದಲ್ಲಿ 29,000 ಕೋಟಿ ರೂ. ಗಳ ಗುರಿ ನೀಡಲಾಗಿದ್ದು, ವರ್ಷಾಂತ್ಯಕ್ಕೆ 32,000 ಕೋಟಿ ರೂ. ಗಳ ರಾಜಸ್ವ ಸಂಗ್ರಹಣೆ ಮಾಡಲಿದ್ದೇವೆ. ಇದು ಆಯವ್ಯಯ ಅಂದಾಜಿಗಿಂತ ಶೇ.10 ರಷ್ಟು ಹೆಚ್ಚಾಗಿರುತ್ತದೆ.
ಇಲಾಖಾವಾರು ಅನುದಾನ ಹಂಚಿಕೆ ವಿವರ
- ಶಿಕ್ಷಣ – 37,960 ಕೋಟಿ
- ಜಲಸಂಪನ್ಮೂಲ – 22,854 ಕೋಟಿ
- ಗ್ರಾಮೀಣಾಭಿವೃದ್ಧಿ – 20,494 ಕೋಟಿ
- ನಗರಾಭಿವೃದ್ಧಿ – 17,938 ಕೋಟಿ
- ಕಂದಾಯ – 15,943 ಕೋಟಿ
- ಆರೋಗ್ಯ ವಲಯ – 15,151 ಕೋಟಿ
- ಒಳಾಡಳಿತ, ಸಾರಿಗೆ – 14,509 ಕೋಟಿ
- ಇಂಧನ – 13,803 ಕೋಟಿ
- ಸಮಾಜ ಕಲ್ಯಾಣ – 11,163 ಕೋಟಿ
- ಲೋಕೋಪಯೋಗಿ – 10,741 ಕೋಟಿ
- ಕೃಷಿ, ತೋಟಗಾರಿಕೆ – 9,456 ಕೋಟಿ
- ಮಹಿಳಾ, ಮಕ್ಕಳ ಕಲ್ಯಾಣ – 5,676 ಕೋಟಿ
- ಆಹಾರ ವಲಯ – 4,600 ಕೋಟಿ
- ವಸತಿ – 3,787 ಕೋಟಿ
- ಇತರೆ – 1,16,968 ಕೋಟಿ