Share this news

 

 

ಮಂಗಳೂರು: ಹಿಂದೂ ಮುಖಂಡ ಮೂಲತಃ ಬೆಳ್ತಂಗಡಿ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸವಿದ್ದ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ಬಜ್ಪೆಯ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ಕಾರನ್ನು ಲಾರಿಯಲ್ಲಿ ಡಿಕ್ಕಿ ಹೊಡೆಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಮಂಗಳೂರಿನಲ್ಲಿ 2022ರಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹೊಂಚು ಹಾಕಿ ತಲವಾರಿನಿಂದ ಕೊಚ್ಚಿ ಕೊಚ್ಚಿ ಹತ್ಯೆ ಮಾಡಿದ್ದಾರೆ.
ಇತ್ತ ಸುಹಾಸ್ ಶೆಟ್ಟಿ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆಯೇ ಶವ ಇರಿಸಿದ ಎಜೆ ಆಸ್ಪತ್ರೆಯ ಬಳಿ ಹಿಂದೂ ಮುಖಂಡರಾದ ಶಾಸಕ ಡಾ.ಭರತ್ ಶೆಟ್ಟಿ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದು ಸಧ್ಯ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು,ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ನಗರದೆಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.

 

 

 

 

 

 

 

 

 

 

Leave a Reply

Your email address will not be published. Required fields are marked *