Share this news

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋ.ರೂ  ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ ಜೊತೆಗೆ ಈ ರಸ್ತೆಯಲ್ಲಿ ಕಡಿದಾದ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿಗಾಗಿ ಶಾಸಕ ವಿ ಸುನಿಲ್‌ ಕುಮಾರ್‌ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನಿರಂತರ ಪ್ರಯತ್ನದ ಫಲವಾಗಿ ಇದೀಗ ಸದ್ರಿ ರಸ್ತೆ ಅಭಿವೃದ್ಧಿಗೆ ರೂ.5.00 ಕೋ.ರೂ ಅನುದಾನ ಬಿಡುಗಡೆಯಾಗಿದೆ.
ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಆದಷ್ಟು ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.

 

 

 

 

Leave a Reply

Your email address will not be published. Required fields are marked *