Share this news

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಗುತ್ತಿಗೆದಾರನ ಆತ್ಮಹತ್ಯೆ ಜಟಾಪಟಿ ತಾರಕಕ್ಕೇರಿರುವ ಹೊತ್ತಿನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು 60 ಪರ್ಸೆಂಟ್ ಕಮಿಷನ್ ಕಿಡಿ ಹೊತ್ತಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ. ಪ್ರತಿ ಇಲಾಖೆಯಲ್ಲೂ ಸಚಿವರಿಗೆ ಮೊದಲು ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ಬಿಡುಗಡೆ ಮಾಡುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಕುಮಾರಸ್ವಾಮಿ ಮಾಡಿರುವ ಲಂಚದದ ಆರೋಪಕ್ಕೆ ಟಕ್ಕರ್ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ಆರೋಪ ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ಆರೋಪಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಬಾಯಿ ಚಪಲಕ್ಕೆ ಮಾತನಾಡುತ್ತಿದ್ದ ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.

ಒಟ್ಟಿನಲ್ಲಿ, ಅಂದು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಬಿಜೆಪಿಯನ್ನು ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಇದೀಗ 60 ಪರ್ಸೆಂಟ್ ಆರೋಪ ಕೇಳಿಬಂದಿದೆ.


 

 

 

 

 

 

 

 

 

L

 

 

 

 

 

Leave a Reply

Your email address will not be published. Required fields are marked *