Share this news

ಕಾರ್ಕಳ: ಭಾರತದ ಸರ್ವಶ್ರೇಷ್ಟ ಪ್ರಜಾಪ್ರಭುತ್ವವನ್ನು ಬಲಶಾಲಿಗೊಳಿಸುವಲ್ಲಿ ಸ್ಪೂರ್ತಿ ನೀಡುವ  ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ. ದ್ವಜವಂದನೆ, ಪ್ರಜಾಪ್ರಭುತ್ವಕ್ಕಾಗಿ ಶ್ರಮಿಸಿದ ಕ್ರಾಂತಿಕಾರರ ಸ್ಮರಣೆ ಮತ್ತು ರಾಷ್ಟçಗೀತೆಯ ಗಾಯನ ಇವುಗಳ ಮೂಲಕ  ರಾಷ್ಟ್ರೀಯ ಭಾವೈಕ್ಯತೆಯನ್ನು ಜಾಗೃತಗೊಳಿಸುವಲ್ಲಿ ಈ ಆಚರಣೆ ಅರ್ಥಪೂರ್ಣವಾಗಿದೆ ಎಂದು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಹೇಳಿದರು.
ಅವರು ಕಾರ್ಕಳ ಗಾಂಧಿ ಮೈದಾನದಲ್ಲಿ ಇಂದು ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಿದರು.


ವಿವಿಧ ಧರ್ಮ, ಜಾತಿ, ಭಾಷೆ, ಸಂಪ್ರದಾಯ, ಸಂಸ್ಕೃತಿ ಹಾಗೂ ವಿವಿಧ ಸಾಮಾಜಿಕ, ಆರ್ಥಿಕ ಹಿನ್ನೆಲೆಯಿಂದ ಕೂಡಿದ ಎಲ್ಲಾ ವರ್ಗದ ಜನತೆಗೂ ಅನ್ವಯವಾಗುವಂತಹ ಸಂವಿಧಾನವನ್ನು ರಚಿಸುವುದು ಒಂದು ಸವಾಲಾಗಿತ್ತು. ಆ ಸವಾಲುಗಳನ್ನು ಸ್ವೀಕರಿಸಿ, ಭಾರತದ ಜನತೆಯ ಶಕ್ತಿ ಮತ್ತು ಸವಾಲನ್ನು ಪ್ರತಿಬಿಂಬಿಸುವ ಸಮೃದ್ಧ ಸಂವಿಧಾನವನ್ನು ರಚಿಸಿದ ಧೀಮಂತ ವ್ಯಕ್ತಿಗಳನ್ನು ನೆನೆಯಲು ಈ ಕಾರ್ಯಕ್ರಮ ಪೂರಕವಾಗಿದೆ. ಕಳೆದ 73 ವರ್ಷಗಳಿಂದ ಪರಿಪಕ್ವವಾಗಿ ಬೆಳೆದು ತನ್ನ ಪ್ರಜೆಗಳ ನೆಮ್ಮದಿಯ ಜೀವನ ನಡೆಸಲು ಬೇಕಾದ ಪರಿಕರ ಹಾಗೂ ಪರಿಸರವನ್ನು ಈ ಪ್ರಜಾತಂತ್ರ ವ್ಯವಸ್ಥೆ ರೂಪಿಸಿದೆ ಎಂದರು.


ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಗುರುದತ್, ಡಿವೈಎಸ್ಪಿ ವಿಜಯ ಪ್ರಸಾದ್, ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಪುರಸಭೆ ಉಪಾಧ್ಯಕ್ಷೆ ಪಲ್ಲವಿ ಉಪಸ್ಥಿತರಿದ್ದರು.
ಧ್ವಜಾರೋಹಣಕ್ಕೂ ಮುನ್ನ ಕಾರ್ಕಳ ಅನಂತಶಯನದಿAದ ಗಾಂಧಿ ಮೈದಾನದವರೆಗೆ ಪಥಸಂಚಲನ ನಡೆಯಿತು.


ಸಭಾ ಕಾರ್ಯಕ್ರಮದ ಬಳಿಕ ಮಂಜುನಾಥ ಪೈ ಸಾಂಸ್ಕೃತಿಕ ಸಭಾಭವನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ, ಪುರಸಭೆ ಉಪಾಧ್ಯಕ್ಷೆ ಪಲ್ಲವಿ, ಮುಖ್ಯಾಧಿಕಾರಿ ರೂಪಾ ಜಿ.ಶೆಟ್ಟಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ದೇವದಾಸ್ ಕೆರೆಮನೆ ಮತ್ತು ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *