ಕಾರ್ಕಳ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಶ್ರೀ ಬಹ್ಮಾನಂದ ಸರಸ್ವತೀ ಭಾನುವಾರ ಬೆಳಗ್ಗೆ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ಗೆ ಭೇಟಿ ನೀಡಿದರು.
ಅವರನ್ನು ಸಚಿವ ವಿ. ಸುನೀಲ್ ಕುಮಾರ್ ಸ್ವಾಗತಿಸಿದರು. ಥೀಮ್ ಪಾರ್ಕ್ ಕೇವಲ ಪ್ರವಾಸದೋಮ್ಯಕ್ಕೆ ಸೀಮಿತವಾಗದೆ ಧಾರ್ಮಿಕತೆಯ ಕೇಂದ್ರವಾಗಿ ರೂಪುಗೊಂಡಿರುವುದು ಶ್ಲಾಘನೀಯ.ತುಳುನಾಡಿನ ಧರ್ಮ ಸಂಸ್ಕೃತಿಯ ಪ್ರತೀಕವಾಗಿರುವ ಪರಶುರಾಮ ಥೀಮ್ ಪಾರ್ಕ್ ಮುಂದಿನ ಜನಾಂಗಕ್ಕೆ ಮಾದರಿಯಾಗಲಿ ಎಂದು ಶುಭಹಾರೈಸಿದರು.