ನವದೆಹಲಿ: ಗೋಧ್ರೋತ್ತರ ಗಲಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಸಾರುವ ಬಿಬಿಸಿ ನಿರ್ಮಾಣ ಮಾಡಿರುವ ಸಾಕ್ಷ್ಯಚಿತ್ರಕ್ಕೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಸರ್ಕಾರದ ಈ ನಿರ್ಧಾರ ದುರುದ್ದೇಶ, ಸ್ವೇಚ್ಛಾನುಸಾರ ಮತ್ತು ಸಂವಿಧಾನ ವಿರೋಧಿಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ವಕೀಲ ಎಂ.ಎಲ್.ಶರ್ಮಾ ಈ ಪಿಐಎಲ್ ಸಲ್ಲಿಸಿದ್ದು, ಬಿಬಿಸಿ ನಿರ್ಮಾಣ ಮಾಡಿರುವ ಸಾಕ್ಷ್ಯಚಿತ್ರದ 2 ಭಾಗವನ್ನು ಕೋರ್ಟ್ ಪರಿಶೀಲಿಸಿ ಗುಜರಾತ್ ಗಲಭೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.