Share this news

ಕಾರ್ಕಳ : ಮುಂಡ್ಕೂರು ,ಮುಲ್ಲಡ್ಕ, ಇನ್ನಾ, ಗ್ರಾಮಗಳ ಊರ ಪರ ಊರ ಅಸಂಖ್ಯಾತ ಭಕ್ತಾದಿಗಳ ಶ್ರದ್ಧಾ ಕೇಂದ್ರವಾಗಿರುವ ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಶನಿವಾರ ಸಂಭ್ರಮದ ವರ್ಷಾವದಿ ಬ್ರಹ್ಮರಥೋತ್ಸವ ಸಂಪನ್ನಗೊಂಡಿತು.

ಕ್ಷೇತ್ರದಲ್ಲಿ ರಥಾರೋಹಣ ,ಮಹಾಅನ್ನ ಸಂತರ್ಪಣೆ ನಡೆದು ಸಾವಿರಾರು ಭಕ್ತಾದಿಗಳು ಅನ್ನ ಪ್ರಸಾದ ಸ್ವೀಕರಿಸಿದರು. ಅಪಾರ ಸಂಖ್ಯೆಯ ಭಕ್ತಾದಿಗಳಿದ್ದು ದೇವರ ದರ್ಶನ ಪಡೆದರು .

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ್ ಆಚಾರ್ಯ, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಎಸ್. ಶೆಟ್ಟಿ ವ್ಯವಸ್ಥಾಪನ ಸಮಿತಿಯ ಸದಸ್ಯರು ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *