Share this news

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ.

ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕಚೇರಿಯಲ್ಲಿ 1.62 ಕೋಟಿ ರೂ. ಹಣ ಪತ್ತೆಯಾಗಿದೆ.. ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. ಶಾಸಕರ ಪುತ್ರ ಪ್ರಶಾಂತ್ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ

2008ರಲ್ಲಿ KAS ಪಾಸ್ ಆಗಿದ್ದ ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ.  ಈ ಹಿಂದೆ ನಡೆದಿರುವ KSDL  ನ ಟೆಂಡರನಲ್ಲೂ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿರುವ ಎಲ್ಲ ಹಣವನ್ನು  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

40 ಲಕ್ಷದ ಹೊರತಾಗಿ ಬೇರೆ ಬೇರೆ ಹಣದ ಬ್ಯಾಗ್  ಗಳು ಪತ್ತೆಯಾಗಿವೆ. ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಗೆ ಶಾಸಕ ಮಾಡಳ್ ವಿರೂಪಾಕ್ಷಪ್ಪ ಆಗಾಗ ಬರುತ್ತಿದ್ದರು. ಕ್ರೆಸೆಂಟ್ ರಸ್ತೆಯ ಬಿಲ್ಡಿಂಗ್  ವೊAದರ ಮೊದಲ ಮಹಡಿಯಲ್ಲಿ ಕಚೇರಿಯಿದ್ದು, ಟೆಂಡರ್ ಪ್ರಕ್ರಿಯೆ ಡೀಲ್ ಸ್ಪಾಟ್ ಆಗಿದೆ. ಕೆಲ ಸಿಬ್ಬಂದಿಗಳೊAದಿಗೆ ಪ್ರಶಾಂತ್ ಕಚೇರಿ ನಡೆಸುತ್ತಿದ್ದಾರೆ.

ಈ ಕುರಿತಾಗಿ ಲೋಕಾಯುಕ್ತ ಐಜಿಪಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಪ್ರತಿಕ್ರಿಯೆ ನೀಡಿದ್ದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಟೆಂಡರ್   ನಲ್ಲಿ ಭಾಗಿಯಾಗಿದ್ದ ಗುತ್ತಿಗೆದಾರನಿಂದ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಶಾಂತ್ ಬಲೆಗೆ ಬಿದ್ದಿದ್ದಾರೆ.  KSDL ಖಾಸಗಿ ವ್ಯಕ್ತಿ ಇಂದು ಬೆಳಗ್ಗೆ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ FIR ದಾಖಲಿಸಿ ದಾಳಿ ಮಾಡಲಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *