Share this news

ಕಾರ್ಕಳ: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಸಮೃದ್ಧಿ ಸಹಕಾರಿ ಸೌಧವು (ನಾಳೆ)  ಮಾ. 11ರಂದು ಉದ್ಘಾಟನೆಗೊಳ್ಳಲಿದೆ.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಹವಾನಿಯಂತ್ರಿತ ಬ್ಯಾಂಕಿಂಗ್‌ ಕಚೇರಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಗೃಹಬಳಕೆ ವಿಭಾಗವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ನವೋದಯ ಸಹಕಾರಿ ಭವನವನ್ನು ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ವಾದಿರಾಜ ಶೆಟ್ಟಿ, ಭದ್ರತಾ ಕೊಠಡಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ರಸಗೊಬ್ಬರ ವಿಭಾಗವನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪಡಿತರ ವಿಭಾಗವನ್ನು ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹಾಗೂ ಅಡಳಿತ ಕಚೇರಿಯನ್ನು ಮುಂಡ್ಕೂರು ದೊಡ್ಡಮನೆ ಫ್ಯಾಮಿಲಿ ಟ್ರಸ್ಟ್, ಅಧ್ಯಕ್ಷ ಎನ್‌.ಎಸ್‌.ಶೆಟ್ಟಿ ಉದ್ಘಾಟಿಸಲಿದ್ದಾರೆ.


ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ದ.ಕ. ಜಿಲ್ಲಾ ಕೇಂದ್ರ ಬ್ಯಾಂಕ್‌ ಮಾಜಿ ಅಧ್ಯಕ್ಷ ಜಗದೀಶ್ಚಂದ್ರ ಹೆಗ್ಡೆ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಎಚ್‌.ಶೆಟ್ಟಿ ಮುಂಡ್ಕೂರು ಚರ್ಚ್‌ ಧರ್ಮಗುರು ರೋನಾಲ್ಡ್ ಮಿರಾಂದ, ಆರ್‌ಜೆಎಂ ಖತೀಬರಾದ ಹ್ಯಾರಿಸ್‌ ಮದನಿ, ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀ ನಾರಾಯಣ ಜಿ.ಎನ್., ಮುಂಡ್ಕೂರು ಗ್ರಾಪಂ ಅಧ್ಯಕ್ಷೆ ಸುಶೀಲಾಬಾಬು, ಉಪಾಧ್ಯಕ್ಷ ಭಾಸ್ಕರ್, ಎಂ.ಶೆಟ್ಟಿ, ಇನ್ನಾ ಗ್ರಾಪಂ ಅಧ್ಯಕ್ಷ ಕುಶ ಆರ್. ಮೂಲ್ಯ, ವಿಠೋಬ ದೇವಸ್ಥಾನದ ಮೊಕ್ತೇಸರ ವೆಂಕಟೇಶ್‌ ಕಾಮತ್ ,ಜಾರಿಗೆಕಟ್ಟೆ ಶ್ರೀ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ, ಕಜೆ ಮಾರಿಗುಡಿ ದೇವಸ್ಥಾನದ ಗೌರವಾಧ್ಯಕ್ಷ ಎ.ಜಿ.ಕರ್ಕೇರ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ್ ಕುಮಾರ್ ಶೆಟ್ಟಿ ಹಾಗೂ ಪ್ರಗತಿಪರ ಕೃಷಿಕ ಸುಭೋದ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ವಾದಿರಾಜ ಶೆಟ್ಟಿ, ಉಪಾಧ್ಯಕ್ಷ ಸಿ‌‌ಲ್ವೆಸ್ಟರ್ ಡಿಮೆಲ್ಲೋ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅರುಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಶತಮಾನ ಕಂಡ ಸಂಸ್ಥೆ:

ಶತಮಾನದ ಹಿಂದೆ ದೊಡ್ಡಮನೆ ವೆಂಕಣ್ಣ ಶೆಟ್ಟಿ ಅವರಿಂದ ಸ್ಥಾಪಿಸಲ್ಪಟ್ಟ ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ಪ್ರಸ್ತುತ 291 ಸದಸ್ಯರನ್ನು ಹೊಂದಿದೆ. ಮುಂಡ್ಕೂರನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೊಸೈಟಿ ಇನ್ನಾ, ಸಚ್ಚರಿಪೇಟೆಯಲ್ಲಿ ಶಾಖೆಗಳನ್ನು ತೆರೆದಿದೆ.  2002ರಿಂದ ಸಚ್ಚರಿಪೇಟೆಯಲ್ಲಿ 2004ರಿಂದ ಇನ್ನಾದಲ್ಲಿ ಸೊಸೈಟಿ ತನ್ನ ಸಂತ ಕಟ್ಟಡದಲ್ಲೇ ಕಾರ್ಯಾಚರಿಸುತ್ತಿದೆ.

ಸಂಘವು ಸತತ 7ನೇ ಬಾರಿ ಡಿಸಿಸಿ ಬ್ಯಾಂಕ್‌ ವಿಶೇಷ ಪ್ರೋತ್ಸಾಹ ಬಹುಮಾನಕ್ಕೆ ಪಾತ್ರವಾಗಿದೆ. ಸಂಘದಲ್ಲಿ ಶಾಂಭವೀ ನಗದು ಪತ್ರ ಸಂಚಯ ಠೇವಣಾತಿ, ಖಾತೆ, ನಿರಖು ಠೇವಣಾತಿ, ಪಿಗ್ಮಿ ಠೇವಣಿ, ಉಳಿತಾಯ ಯೋಜನೆ ಗಳು ಲಭ್ಯವಿದ್ದು, ಕೃಷಿಕರಿಗೆ ರಸಗೊಬ್ಬರ, ಕೃಷಿ ಉಪಕರಣ, ಗೃಹೋಪಯೋಗಿ ವಸ್ತುಗಳು, ಪಡಿತರ ಸಾಮಗ್ರಿಗಳು ದೊರೆಯುತ್ತಿದೆ.

ಸಹಕಾರಿ ಧುರೀಣ, ಪ್ರಗತಿಪರ ಕೃಷಿಕ, ಉದ್ಯಮಿ ಎಂ.ವಾದಿರಾಜ್ ಶೆಟ್ಟಿ ಅವರು 1994ರಿಂದ ನಿರಂತರವಾಗಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಮೆಲ್ಲೊ, ನಿರ್ದೇಶಕರಾದ ಪ್ರವೀಣ್ ಶೆಟ್ಟಿ ಇನ್ನಾ, ಮಹಾಬಲ ಪೂಜಾರಿ, ಅಮರನಾಥ ಶೆಟ್ಟಿ ಇನ್ನಾ, ಉಮೇಶ್ ಶೆಟ್ಟಿ, ಪುರುಷೋತ್ತಮ ಪೂಜಾರಿ, ಅಶೋಕ್ ಶೆಟ್ಟಿ ಖಂಡಿಗ, ಸಂಜೀವ, ಅನಸೂಯಾ ಸುಧಾಕರ , ಭಟ್ ಪೊಸ್ರಾಲು, ಲೀಲಾ ಜಯಂತ್ ಕುಮಾರ್ (ಆರ್ಥಿಕ ಪ್ರತಿನಿಧಿ), ಕಾರ್ಯನಿರ್ವಹಣಾಧಿಕಾರಿ ಅರುಣ್ ಕುಮಾರ್ ಸಂಘದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ

Leave a Reply

Your email address will not be published. Required fields are marked *