ಕಾರ್ಕಳ :ಜನತೆಯ ಆಶೀರ್ವಾದದಿಂದ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ 2018ರಲ್ಲಿ 3ನೇ ಬಾರಿ ಶಾಸಕನಾಗಿ ಆಯ್ಕೆಯಾಗಿ, ಕಳೆದ 5 ವರ್ಷಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈ ನಿಟ್ಟಿನಲ್ಲಿ ನನ್ನ ಶಾಸಕತ್ವದ 5 ವರ್ಷಗಳ ಅವಧಿಯಲ್ಲಿ ನಡೆಸಿದ ಅಭಿವೃದ್ಧಿ ಚಟುವಟಿಕೆಗಳ ಸಮಗ್ರ ಚಿತ್ರಣವನ್ನು ರಿಪೋರ್ಟ್ ಕಾರ್ಡ್ ಬಿಡುಗಡೆ ಕಾರ್ಯಕ್ರಮವು ಮಾ.19 ರಂದು ಸಂಜೆ 4.30ಕ್ಕೆ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಲಿದೆ ಎಂದು ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಜನಪ್ರತಿನಿಧಿಯನ್ನು ಜನರು ಆಯ್ಕೆ ಮಾಡಿದ ನಂತರ ತಾನು ಜನರಿಗೆ ಏನು ಮಾಡಿದ್ದೇನೆ ಎಂಬುದನ್ನು ಜನತೆಗೆ ತಿಳಿಯಪಡಿಸುವುದು ಶಾಸಕನ ಕರ್ತವ್ಯ. ನನ್ನ ಈ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಗರಿಷ್ಠ ಮಟ್ಟದಲ್ಲಿ ಮಾಡಿದ ತೃಪ್ತಿ ನನಗಿದೆ. ಕಾರ್ಕಳ ಕ್ಷೇತ್ರದಲ್ಲಿ ಶಾಸಕನಾದ ಅವಧಿಯಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ಸಾಂಸ್ಕೃತಿಕ, ಪ್ರವಾಸೋದ್ಯಮ, ಧಾರ್ಮಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ಧಿಯನ್ನು ಮಾಡಿರುವ ಸಂತೃಪ್ತಿ ನನಗಿದೆ. ಇದನ್ನು ನಾನು ನನ್ನನ್ನು ಆಯ್ಕೆ ಮಾಡಿರುವ ಜನತೆಗೆ ತಿಳಿಯಪಡಿಸುವುದು ನನ್ನ ಆದ್ಯ ಕರ್ತವ್ಯ ಎಂದು ಸುನಿಲ್ ಹೇಳಿದ್ದಾರೆ.
2018 ರ ಒಂದು ವರ್ಷ ವಿರೋಧ ಪಕ್ಷದ ಶಾಸಕನಾಗಿ ಇನ್ನೆರಡು ವರ್ಷ ಆಡಳಿತ ಪಕ್ಷದ ಶಾಸಕನಾಗಿ ಕಳೆದ ಎರಡು ವರ್ಷಗಳಿಂದ ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವನಾಗಿ ಕಾರ್ಕಳ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂಪೂರ್ಣ ಚಿತ್ರಣ ಈ ರಿಪೋರ್ಟ್ ಕಾರ್ಡ್ ನಲ್ಲಿದ್ದು ಕಾರ್ಯಕ್ರಮಕ್ಕೆ ತಾವೆಲ್ಲರೂ ಭಾಗವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಸಚಿವ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ
