Share this news

ಬೆಂಗಳೂರು : ಕೆಯುಡಬ್ಲ್ಯೂಜೆ ಮನವಿ ಮೇರೆಗೆ ವಿಧಾನಸಭೆ ಚುನಾಚಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಇದೇ ಮೊಟ್ಟ ಮೊದಲ ಬಾರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿರುವ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದರು.

ಚುನಾವಣೆ ದಿನ ಕಾರ್ಯನಿರತರಾಗಿರುವ ಪತ್ರಕರ್ತರು ಯಾರು ಎನ್ನುವುದನ್ನು ಆಯಾ ಮಾಧ್ಯಮ ಸಂಸ್ಥೆಗಳು ಧೃಢೀಕರಣ ಮಾಡಿ ಆಯಾ ಜಿಲ್ಲೆಯ ಚುನಾವಣಾಧಿಕಾರಿ ಮೂಲಕ ಒಪ್ಪಿಗೆ ಪಡೆದವರಿಗೆ ಅಂಚೆ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗುವುದು. ಅವರಿಗೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಸಿಗಲಿದೆ. ಅವರು ಮತಚಲಾವಣೆ ಮಾಡಲು ಚುನಾವಣೆಗೆ (ಮೂರು ದಿನ ಮೊದಲು) ಮುನ್ನ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮೀನಾ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಪತ್ರಕರ್ತರ (ಅಗತ್ಯವಿದ್ದವರು ಮಾತ್ರ) ಅಂಚೆ ಮತದಾನ ಬಗ್ಗೆ ಆಯಾ ಜಿಲ್ಲೆಗೆ ಮಾಹಿತಿ ಕಳುಹಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದರು.

ಪತ್ರಕರ್ತರ ಪರವಾಗಿ ಕೆಯುಡಬ್ಲ್ಯೂಜೆ ಸಲ್ಲಿಸಿದ ಮನವಿ ಪರಿಗಣಿಸಿ ಅಂಚೆ ಮತದಾನಕ್ಕೆ ಅವಕಾಶ ಮಾಡಿರುವುದು ಶ್ಲಾಘನೀಯ . ಮುಂದೆ ಆನ್ ಲೈನ್ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು  ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯ ಚುನಾವಣಾಧಿಕಾರಿ ಅವರಲ್ಲಿ ಮನವಿ ಮಾಡಿದರು. ಆನ್ ಲೈನ್ ಮತದಾನಕ್ಕೆ ಸದ್ಯ ಇದಕ್ಕೆ ಅವಕಾಶವಿಲ್ಲ. ಈ ಬಗ್ಗೆ ಮುಂದೆ ಪರಿಶೀಲನೆ ಮಾಡುವುದಾಗಿ ಅವರು ತಿಳಿಸಿದರು.

Leave a Reply

Your email address will not be published. Required fields are marked *