Share this news

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್​ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಯುಎಪಿಎ ಕಾಯ್ದೆಯಡಿ ಎನ್​​ಐಎ ತಂಡ ಬಂಧಿಸಿತ್ತು.

ಪಕ್ಷದ ಸಭೆ ನಡೆಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿತ್ತು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಸದ್ಯ ಜೈಲಿನಲ್ಲಿದ್ದಾರೆ. ಶಾಫಿ ಬೆಳ್ಳಾರೆ ಜೈಲಿನಿಂದಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೈಲಿನಿಂದಲೇ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ತಮ್ಮ ಏಜೆಂಟರ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಶಾಫಿ ಬಂಧನದ ನಂತರ ಎಸ್‌ಡಿಪಿಐಗೆ ಭಾರೀ ಹೊಡೆತ ಬಿದ್ದಿತ್ತು.

Leave a Reply

Your email address will not be published. Required fields are marked *