ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜೃಂಭಿಸುತ್ತವೆ. ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು.
ಅವರು ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊAದು ಮತವೂ ಅದು ಪಿ.ಎಫ್.ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜೃಂಭಿಸಿ ಕೇಕೆ ಹಾಕುತ್ತವೆ, ರಾಜ್ಯವನ್ನು ಮತ್ತೊಂದು ಅಫ್ಘಾನಿಸ್ತಾನ ಆಗಲು ಬಿಡಬಾರದು ಎಂದರು.
ಬಿಜೆಪಿ ಸರಕಾರ ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಂದೂಗಳ ರಕ್ಷಣೆಗೆ ಕಂಕಣ ಬದ್ಧವಾಗಿದೆ. ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು, ಅದನ್ನು ತಡೆಯಲು ರಾಜ್ಯ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಈ ಎರಡೂ ಕಡೆ ಬಿಜೆಪಿ ಶಾಸಕ ಇರಬೇಕು. ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.