Share this news

ಕಾರ್ಕಳ: ಕಾಂಗ್ರೆಸ್ ಗ್ಯಾರಂಟಿ ಕಾರ್ಡನ್ನು ವಿರೋಧಿಸುವ ಬಿಜೆಪಿಗರು,ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗುವುದಿಲ್ಲವೇ ಎಂದು ಕಾಂಗ್ರೆಸ್ ಮುಖಂಡ ಶುಭದ್ ರಾವ್ ಪ್ರಶ್ನಿಸಿದ್ದಾರೆ.

ಒಂದುವೇಳೆ ಕಾಂಗ್ರೆಸ್ ಸರ್ಕಾರದ ಯೋಜನೆಯ ಲಾಭ ಪಡೆಯುವುದಿಲ್ಲ ಎಂದಾದರೆ ಮೊದಲೇ ಬಹಿರಂಗಪಡಿಸಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಕಂಡು ಭಯಭೀತರಾದ ಬಿಜೆಪಿಗರು ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ತನ್ನ ಅಧಿಕಾರವಧಿಯಲ್ಲಿ ಜನಪರ ಯೋಜನೆಗಳನ್ನು ನೀಡದೇ, ಜನವಿರೋಧಿ ಆಡಳಿತದಿಂದ ಜನತೆಯಿಂದ ತಿರಸ್ಕೃತರಾಗಿದ್ದರಿಂದ,ಬಿಜೆಪಿ ಅಪಪ್ರಚಾರದ ದಾರಿ ಹಿಡಿದಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಬಿಜೆಪಿ ಅಪಪ್ರಚಾರಕ್ಕೆ ಜನತೆ ಕಿವಿಗೊಡುವುದಿಲ್ಲ. ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಎಷ್ಟು ಅಪಪ್ರಚಾರ ನಡೆಸಿದರೂ, ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಶುಭದ್ ರಾವ್ ಹೇಳಿದ್ದಾರೆ.

Leave a Reply

Your email address will not be published. Required fields are marked *