Share this news

ಕಿನ್ನಿಗೋಳಿ :ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ದ.ಕ.ಜಿಲ್ಲೆ ಇವರ ಮಾರ್ಗದರ್ಶನದಲ್ಲಿ, ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಲ್ಲಾಪು ರಾಜ ಕಾಲುವೆಯ ಕಿಂಡಿ ಅಣೆಕಟ್ಟುವಿನ ನಿರ್ವಹಣಾ ಕಾರ್ಯ ಜೂ.9ರಂದು ಜರುಗಿತು.

ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಾಪು ಮಾಗಂದಡಿಯ ಪರಂಬೋರು ರಾಜ ಕಾಲುವೆಯಲ್ಲಿ ಈ ಮೊದಲು ಸಂಸ್ಥೆಯ ಸದಸ್ಯರ ಶ್ರಮದಾನದ ಮೂಲಕ ಅಳವಡಿಸಲಾಗಿದ್ದ ಹಲಗೆಗಳನ್ನು ಮಳೆಗಾಲ ಪ್ರಾರಂಭಗೊAಡಿರುವ ಹಿನ್ನೆಲೆಯಲ್ಲಿ ತೆರವು ಗೊಳಿಸಿ, ಸಂಗ್ರಹವಾಗಿದ್ದ ಮರದ ಕೊಂಬೆಗಳನ್ನು ಹಾಗೂ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಸದಸ್ಯರ ಶ್ರಮದಾನ ಮೂಲಕ ಹೊರತೆಗೆಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷರಾದ ಸಂತೋಷ್ ದೇವಾಡಿಗ ,ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷರಾದ ಸುರೇಶ್ ಶೆಟ್ಟಿ, ಕೋಶಾಧಿಕಾರಿ ಸಂಪತ್ ದೇವಾಡಿಗ, ಸದಸ್ಯ ಬಾಲಕೃಷ್ಣ ಲೈಟ್ ಹೌಸ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *