Share this news

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ(ಎನ್‌ಆರ್‌ಸಿ) ಬೆಂಬಲಿಸಿದ ಕಾರಣಕ್ಕೆ ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಿಕರು ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದ ತನಿಖೆಗೆ ಸೂಕ್ತ ಸಹಕಾರ ನೀಡಬೇಕು. ಇಲ್ಲದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಅನಾಮಿಕರು ನಕಲಿ ಫೇಸ್‌ಬುಕ್ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ ಸಂಬAಧ ಸೌದಿ ಅರೇಬಿಯಾ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಅಲ್ಲಿಯೇ ಜೈಲುವಾಸ ಮಾಡುತ್ತಿರುವ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್‌ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಎಚ್ಚರಿಕೆ ನೀಡಿದೆ.

ಘಟನೆ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ಫೇಸ್‌ಬುಕ್ ಸಂಸ್ಥೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ಸುಳ್ಳು ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು. ಮಂಗಳೂರು ಪೊಲೀಸರು ಸಹ ಈ ಪ್ರಕರಣದ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂ.22ಕ್ಕೆ ಮುಂದೂಡಿದೆ.

ಮAಗಳೂರಿನ ಬಿಕರನಕಟ್ಟೆ ನಿವಾಸಿ ಶೈಲೇಶ್ ಕುಮಾರ್ (45) ಕಳೆದ 25 ವರ್ಷಗಳಿಂದ ಸೌದಿ ಅರೇಬಿಯಾದ ಅಲ್‌ಕುಬರ್ ಪ್ರದೇಶದಲ್ಲಿ ಉದ್ಯೊ?ಗ ಮಾಡುತ್ತಿದ್ದು, ಪತ್ನಿ ಮತ್ತು ಮಕ್ಕಳು ಬಿಕರನಕಟ್ಟೆಯಲ್ಲಿ ವಾಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರೂಪಿಸಿದ ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆ ಬೆಂಬಲಿಸಿ 2019ರಲ್ಲಿ ಸೌದಿ ಅರೇಬಿಯಾದಲ್ಲಿ ಶೈಲೇಶ್ ಫೇಸ್‌ಬುಕ್ ಪೋಸ್ಟ್ ಹಾಕಿದ್ದರು. ಇದರಿಂದ ಅನಾಮಿಕರಿಂದ ಬೆದರಿಕೆ ಬಂದ ಕಾರಣ ತಮ್ಮ ಫೇಸ್‌ಬುಕ್ ಖಾತೆಯನ್ನು ಶೈಲೇಶ್ ರದ್ದುಪಡಿಸಿದ್ದರು.

 

Leave a Reply

Your email address will not be published. Required fields are marked *