Share this news

ಮೂಡಬಿದಿರೆ : ಮೂಡಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆಯಾಗಿದ್ದಾರೆ. ಇವರು ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಡಂದಲೆ ಪಾಲಡ್ಕ ಇದರ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷರಾಗಿ ಹರೀಶ್ ಮೂಡಬಿದಿರೆ, ಕಾರ್ಯದರ್ಶಿಯಾಗಿ ಗೋಪಾಲ್ ಬೆಳ್ವಾಯಿ ಹಾಗೂ ಜೊತೆ ಕಾರ್ಯದರ್ಶಿಯಾಗಿ ಗಣೇಶ್ ನೀರ್‌ಕೆರೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *