Share this news

ಕಾರ್ಕಳ: ನಮ್ಮ ದೇಶಕ್ಕೆ ಹಿರಿಯರ ನಿಃಸ್ವಾರ್ಥ, ತ್ಯಾಗ, ದೇಶಪ್ರೇಮದ ಪರಾಕಾಷ್ಠೆಯ ಪರಿಣಾಮ ಇಂದು ಸ್ವತಂತ್ರ ಭಾರತದಲ್ಲಿ ನಾವು ಜೀವಿಸುತ್ತಿದ್ದೇವೆ. ಬ್ರಿಟಿಷರಿಂದ ಸ್ವಾತಂತ್ರ‍್ಯವನ್ನು ಪಡೆಯಲು ನಮ್ಮ ಪೂರ್ವಜರು ಭಾರತವೆಂಬುದು ಶ್ರೇಷ್ಠ ಭಾರತವಾಗಬೇಕೆಂದು ಬಲಿದಾನಗೈದರು. ಇಂತಹ ಅಮೃತಕಾಲವನ್ನು ನಾವು ಸಂಪತ್ತಿನAತೆ ಕಾಪಾಡಿಕೊಳ್ಳಬೇಕು ಎಂದು ಕಾರ್ಕಳದ ಖ್ಯಾತನ್ಯಾಯವಾದಿ ಶ್ರೀ ಎಂ ಕೆ ವಿಜಯಕುಮಾರ್ ಕರೆ ನೀಡಿದರು.

ಅವರು ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಇಂತಹ ಭರತ ಭೂಮಿಯಲ್ಲಿ ಜನಿಸಿರುವುದೇ ಪುಣ್ಯ. ಈ ದೇಶದ ಪ್ರಜೆಗಳಾಗಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳೋಣ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಅಂಡಮಾನ್‌ನಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿ ಸಂಸ್ಥೆಗೂ ಗೌರವ ತಂದ ಕ್ರಿಯೇಟಿವ್ ಕಾಲೇಜಿನ ಹಳೆವಿದ್ಯಾರ್ಥಿನಿ ನಿಧಿ ಯು ಆಚಾರ್ ಅವರನ್ನು ಸಂಸ್ಥೆಯ ವತಿಯಿಂದ ಹೆಮ್ಮೆಯಿಂದ ಸನ್ಮಾನಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ಸಂಸ್ಥಾಪಕರಾದ ಅಶ್ವತ್ ಎಸ್ ಎಲ್, ಆದರ್ಶ ಎಮ್ ಕೆ, ಅಮೃತ್ ರೈ, ಗಣಪತಿ ಭಟ್ ಕೆ ಎಸ್, ಉಪನ್ಯಾಸಕ ವರ್ಗ ಹಾಗೂ ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು.

ಆಂಗ್ಲಭಾಷಾ ಉಪನ್ಯಾಸಕ ರಾಜೇಶ್ ಶೆಟ್ಟಿ ನಿರೂಪಿಸಿ ವಂದಿಸಿದರು. ವಿನಾಯಕ ಜೋಗ್ ಧನ್ಯವಾದಗೈದರು.ಲೋಹಿತ್ ಎಸ್ ಕೆ ನಿರೂಪಿಸಿದರು.
ಧ್ವಜಾರೋಹಣ ಕಾರ್ಯಕ್ರಮದ ನಂತರ ಪ್ರಸಿದ್ಧ ಚಲನಚಿತ್ರ ಹಿನ್ನಲೆ ಗಾಯಕಿ ‘ಜೀ’ ವಾಹಿನಿಯ ಸರಿಗಮಪ ಸಂಗೀತ ಸ್ಪರ್ಧೆಯ ರನ್ನರ್ ಅಪ್ ಕು. ಸಾಧ್ವಿನಿ ಕೊಪ್ಪ ಮತ್ತು ತಂಡದವರಿAದ ಸದಭಿರುಚಿಯ ಗೀತ ಗಾಯನ “ಕ್ರಿಯೇಟಿವ್ ಸವಿಗಾನ” ಕಾರ್ಯಕ್ರಮ ನೆರವೇರಿತು

Leave a Reply

Your email address will not be published. Required fields are marked *