ಮಂಗಳೂರು : ಮಲೇಶಿಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ಆ.18-20 ವರೆಗೆ ನಡೆದ ಅಂತಾರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್ ನ ಸಿ.ಕೆ. ಕ್ಲಾಸಿಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನ ಮತ್ತು ಕಂಚಿನ ಪದಕಗಳನ್ನು ಪಡೆದಿದ್ದಾರೆ.
2022ರಲ್ಲಿ ನಡೆದ ವಿಶ್ವ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಪಡೆದಿದ್ದರು.
ಇವರು ಕದ್ರಿಯ ಕುಂಜತ್ತೋಡಿ ವಾಸುದೇವ ಭಟ್ ಮತ್ರು ದೀಪಾ ಕೆ.ಎಸ್. ದಂಪತಿ ಪುತ್ರಿ.ಶಾರದಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.
ಡಾ.ಗುರುರಾಜ ಇಟಗಿ ಮತ್ತು ನಿಖಿಲ್ ಶೆಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.