Share this news

ಬೆಂಗಳೂರು: ಜಮೀನು ವಿವಾದ ಪ್ರಕರಣದ ಕುರಿತಂತೆ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.‌ಸುಧಾಕರ್ ಅವರ ವಿರುದ್ದ ಎಫ್ ಐ ಆರ್ ದಾಖಲಾಗಿದ್ದು ಅವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ ಸುಧಾಕರ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುಧಾಕರ್ ಅವರ ರಾಜೀನಾಮೆ ಪಡೆಯಬೇಕು,ಒಂದುವೇಳೆ ವಿಚಾರಣೆ ಬಳಿಕ ಆರೋಪಮುಕ್ತರಾದರೆ ಮತ್ತೆ ಬೇಕಾದರೆ ಅವರು ಸಚಿವರಾಗಲಿ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಗೃಹ ಸಚಿವ ಪರಮೇಶ್ವರ್ ಮಧ್ಯಪ್ರವೇಶ ಮಾಡುತ್ತಿದ್ದಾರೆ. ಪೊಲಿಸರಿಗೆ ತನಿಖೆ ನಡೆಸಲು ಪರಮೇಶ್ವರ್ ಬಿಡಬೇಕು. ತಾವೇ ತನಿಖೆಗೆ ಮುಂದಾಗಬಾರದು. ಗೃಹ ಸಚಿವರು ಯಾವುದೇ ತನಿಖೆ ಮಾಡಲು ಅವಕಾಶ ಇಲ್ಲ. ಸಚಿವರ ವಿರುದ್ದದ ಪ್ರಕರಣದ ವರದಿ ತರಿಸಿಕೊಳ್ಳುವುದಾಗಿ ಹೇಳುತ್ತಾರೆ. ಎಫ್ಐಆರ್ ದಾಖಲಾಗಿದೆ. ಇದರಲ್ಲಿ ವರದಿ ತರಿಸಿಕೊಳ್ಳಲು ಅವಕಾಶ ಇಲ್ಲ. ತನಿಖೆ ನಡೆಸಲು ಪೊಲಿಸರಿಗೆ ಮುಕ್ತ ಅವಕಾಶ ಕೊಡಬೇಕು ಎಂದರು.

ಸುಧಾಕರ್ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಉಡಾಫೆಯಿಂದ ಮಾತನಾಡಿದ್ದಾರೆ. ಸಿದ್ದರಾಮಯ್ಯರಿಗೆ ಸಂವಿಧಾನದ ಮೇಲೆ ವಿಶ್ವಾಸ ಇದ್ದರೆ ಸಚಿವ ಸುಧಾಕರ್ ರಾಜೀನಾಮೆ ಪಡೆಯಬೇಕು ಒಂದು ಒತ್ತಾಯಿಸಿದ್ದಾರೆ.
ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ.ಕಾಂಗ್ರೆಸ್ ನಾಯಕರು ಭಾಷಣದಲ್ಲಿ ಮಾತ್ರ ದಲಿತರ ಪರ ಮಾತನಾಡುತ್ತಾರೆ. ಆದರೆ, ಅವರ ಸಚಿವರ ನಡವಳಿಕೆ ಸಂಪೂರ್ಣ ದಲಿತ ವಿರೋಧಿಯಾಗಿದೆ.ಗ್ಯಾರಂಟಿ ಯೋಜನೆಗಳಿಗೆ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಲಿತರು ಇವರನ್ನು ಕ್ಷಮಿಸುವುದಿಲ್ಲ ಎಂದು ಕುಟುಕಿದ್ದಾರೆ

Leave a Reply

Your email address will not be published. Required fields are marked *