Share this news

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ರೌಡಿ ತಲ್ಲತ್ (39) ಎಂಬಾತನನ್ನುವಬಂಧಿಸಿದ್ದಾರೆ.

ಗೋವಾ, ಮುಂಬೈನಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ರೌಡಿ ತಲ್ಲತ್ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ.

ತನ್ನದೇ ಗ್ಯಾಂಗ್ ಕಟ್ಟಿಕೊಂಡು ಹವಾ ಸೃಷ್ಠಿಸಲು ಯತ್ನಿಸುತ್ತಿದ್ದ ಈತನನ್ನು ಇದೀಗ ಮುಂಬೈನಿಂದ , ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ.

ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಮೇಲೆ ಪ್ರಕರಣಗಳು ದಾಖಲಾಗಿದೆ. ಅಷ್ಟೇ ಅಲ್ಲದೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

 

Leave a Reply

Your email address will not be published. Required fields are marked *