ನವದೆಹಲಿ : ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂಬ ಹೇಳಿಕೆಯಿಂದ ಭಾರತ ಹಾಗೂ ಕೆನಡಾ ನಡುವೆ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಮಧ್ಯೆ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ ಹತ್ಯೆಯಾಗಿದೆ.
ಕೆನಡಾದ ಮೊಗಾ ಜಿಲ್ಲೆಯಲ್ಲಿ ದವೀಂದರ್ ಬಾಂಬಿಹಾ ಗ್ಯಾಂಗ್ ನ ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನೆಕೆಯನ್ನು ಬುಧವಾರ ರಾತ್ರಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
2017ರಲ್ಲಿ ನಕಲಿ ಪಾಸ್ ಪೋರ್ಟ್ ನಲ್ಲಿ ಪಂಜಾಬ್ ನ ಮೊಗಾದಿಂದ ಕೆನಡಕ್ಕೆ ಪಲಾಯನ ಮಾಡಿದ ಡುನೆಕೆ ಎ ವರ್ಗದ ದರೋಡೆಕಾರನಾಗಿದ್ದ. ಆತ ಭಯೋತ್ಪಾದಕ ಅರ್ಷ್ ದೀಪ್ ದಲ್ಲಾ ಅವರ ನಿಕಟ ಸಹಚರನಾಗಿದ್ದ ಮತ್ತು ಖಲಿಸ್ತಾನ್ ಮತ್ತು ಕೆನಡಾದೊಂದಿಗೆ ಸಂಪರ್ಕ ಹೊಂದಿರುವ 43 ದರೋಡೆಕೋರರಲ್ಲಿ ಈತನು ಒಬ್ಬರಾಗಿದ್ದ ಎನ್ನಲಾಗಿದೆ.
ಕೆನಡಾದ ವಿನ್ನಿಪೆಗ್ ನಗರದಲ್ಲಿ ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗ ಹೊತ್ತುಕೊಂಡಿದೆ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಫೇಸ್ ಬುಕ್ ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಾಕಲಾದ ಪೋಸ್ಟ್ ನಲ್ಲಿ ದರೋಡೆಕೋರರಾದ ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿಡ್ಖೇರ ಅವರ ಹತ್ಯೆಯಲ್ಲಿ ಸುಖ ಡುನುಕೆ ಎಂದು ಕರೆಯಲ್ಪಡುವ ಸುಖದೂಲ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿಕೊಂಡಿದ್ದು, ಇದರ ಸೇಡು ತೀರಿಸಿಕೊಳ್ಳಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಯೋಜನೆ, ರೂಪಿಸಿತ್ತು ಎಂದು ಹೇಳಿಕೊಂಡಿದೆ.



