ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಗ್ರಹವಾದ ದೇಣಿಗೆಯನ್ನು ಸಮಾಜಮುಖಿ ಕಾರ್ಯಕ್ಕೆ ಬಳಸುವ ಮೂಲಕ ಕಾರ್ಕಳ ಬಸ್ ಸ್ಟಾö್ಯಂಡ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸೇವಾ ಕಾರ್ಯವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಕಾರ್ಕಳ ಬಸ್ಟ್ಯಾಂಡ್ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವಾರ್ಷಿಕ ಲೆಕ್ಕಪತ್ರ ಸಭೆಯಲ್ಲಿ ದೇಣಿಗೆಯ ರೂಪದಲ್ಲಿ ಸಂಗ್ರಹವಾದ 50 ಸಾವಿರ ರೂಪಾಯಿಗಳನ್ನು ಬಡ ರೋಗಿಗಳ ವೈದ್ಯಕೀಯ ಹಾಗೂ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ನೆರವು ನೀಡಲು ತೀರ್ಮಾನಿಸಲಾಯಿತು.
ರಾಧಾಕೃಷ್ಣ ಸಭಾಭವನದಲ್ಲಿ ಗಣೇಶೋತ್ಸವ ಸಮಿತಿಯ ಸ್ಥಾಪಕಾದ್ಯಕ್ಷ ಶುಭದರಾವ್ ಅಧ್ಯಕ್ಷತೆಯಲ್ಲಿ ಸಮಿತಿಯ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶುಭದ ರಾವ್ ದೇವರ ಮೇಲಿನ ಭಕ್ತಿ ಮತ್ತು ನಂಬಿಕೆಯಿAದ ಭಕ್ತರು ದೇಣಿಗೆಯನ್ನು ನೀಡುತ್ತಾರೆ. ಭಕ್ತರು ನೀಡಿದ ದೇಣಿಗೆಯ ಹಣವನ್ನು ಮರಳಿ ಸಮಾಜಕ್ಕೆ ನೀಡುವ ಮೂಲಕ ಸದ್ಬಳಕೆ ಮಾಡುವುದು ನಮ್ಮ ಕರ್ತವ್ಯ., ಆ ಕಾರಣಕ್ಕಾಗಿ ಪ್ರತೀವರ್ಷ ಗಣೇಶೋತ್ಸವದ ಅಚರಣೆಯಿಂದ ಉಳಿದ ಹಣದಲ್ಲಿ ವೈದ್ಯಕೀಯ ಮತ್ತು ಶೈಕ್ಷಣಿಕ ನೆರವು ನೀಡುತ್ತಾ ಬಂದಿದ್ದೇವೆ. ಜಾಗೆಯೆರ ಈ ವರ್ಷವೂ ರೂ.50 ಸಾವಿರವನ್ನು ಸಹಾಯಧನದ ರೂಪದಲ್ಲಿ ಅರ್ಹರಿಗೆ ನೆರವಿನ ರೂಪದಲ್ಲಿ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಸೌಜನ್ಯ ಉಪಾಧ್ಯಾಯ ಮಾತನಾಡಿ, ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಧಾರ್ಮಿಕ ಕಾರ್ಯಕ್ರಮದ ಜತೆಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಎಲ್ಲರಿಗೂ ಆದರ್ಶವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಜ್ಯೋತಿಷ್ಯಿ ವಾದಿರಾಜ ಆಚಾರ್ಯ, ಗೌರವಾದ್ಯಕ್ಷರಾದ ಜಗದೀಶ್ ಮಲ್ಯ ಸಂದರ್ಭೋಚಿತ ಮಾತನಾಡಿದರು. ವೇದಿಕೆಯಲ್ಲಿ ಸಮಿತಿಯ ಅದ್ಯಕ್ಷರಾದ ಸುರೇಶ್ ದೇವಾಡಿಗ, ಉಪಾಧ್ಯಕ್ಷರಾದ ಶಿವಾಜಿ ರಾವ್, ರಾಜರಾಮ್ ಕಾಮತ್, ವಸಂತ ಪ್ರಭು ಉಪಸ್ಥಿತರಿದ್ದರು .
ಸಮಿತಿಯ ಕಾರ್ಯದರ್ಶಿ ಇಕ್ಬಾಲ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿದರು.