Share this news

ಕಾರ್ಕಳ:ದುರ್ಗ ಗ್ರಾಮದ ಸಂದೇಶ್ ಶೆಟ್ಟಿ ಎಂಬವರು ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದು ಅವರ ಶವವು ಬುಧವಾರ ಮುಂಜಾನೆ ಕಾವೇರಡ್ಕ ಬಳಿಯ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂದೇಶ್ ಶೆಟ್ಟಿ ಕೂಲಿ ಕಾರ್ಮಿಕರಾಗಿದ್ದು,ಕಳೆದ ಶನಿವಾರದಂದು ನಾಪತ್ತೆಯಾಗಿದ್ದರು.ಇವರ ಪತ್ತೆಗೆ ಮನೆಯವರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸಂದೇಶ್ ಶೆಟ್ಟಿ ಪತ್ತೆಯಾಗಿರಲಿಲ್ಲ.

ಸಂದೇಶ್ ಶೆಟ್ಟಿ ನಾಪತ್ತೆ ದಿನವೇ ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದ್ದು ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿದೆ. ಸ್ಥಳೀಯರು ಕಾರ್ಕಳ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

 

 

 

 

Leave a Reply

Your email address will not be published. Required fields are marked *