ಕಾರ್ಕಳ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರ ಮೃತದೇಹ ಇಂದು (ಸೋಮವಾರ) ಕಾರ್ಕಳ ಲಕ್ಷ್ಮಿದೇವಿ ಕಲ್ಯಾಣ ಮಂಟಪ ಸಮೀಪ ಪತ್ತೆಯಾಗಿದೆ.
ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಅವರು ಅಕ್ಟೋಬರ್ 19 ರಿಂದ ನಾಪತ್ತೆಯಾಗಿದ್ದರು. ಅಂದು ರಾತ್ರಿ 7:30ಕ್ಕೆ ಪತ್ನಿಗೆ ಕರೆ ಮಾಡಿ ತಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ತಿಳಿಸಿದ್ದರು. ಆ ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಶ್ರತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು.
2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು ಎರಡು ತಿಂಗಳ ಹಿಂದಷ್ಟೇ ಭಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಅಕ್ಟೋಬರ್ 18ರಂದು ರಜೆ ಪಡೆದಿದ್ದ ಶೃತಿನ್ ಅಕ್ಟೋಬರ್ 19ರಂದು ಸಿಎಲ್ ಪಡೆದಿದ್ದರು. ಬಳಿಕ ನಾಪತ್ತೆಯಾಗಿದ್ದರು ಇದೀಗ ಅವರ ಶವ ಪತ್ತೆಯಾಗಿದ್ದು ತನಿಖೆಯ ಬಳಿಕವಷ್ಟೇ ಸತ್ಯಾಸತ್ಯತೆ ಹೊರಬೀಳಲಿದೆ.




