ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್`ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು ಇದು ಶುದ್ಧಸುಳ್ಳು, ಕಳೆದ 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿಯಾಗಿದೆಯೇ ಹೊರತು ಪ್ರಕರಣದ ಮರುತನಿಖೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಅವರು, 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬAಧಪಟ್ಟAತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು ಎಂದಿದ್ದಾರೆ.
2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ ಎಂದು ತಿಳಿಸಿದ್ದಾರೆ.
ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂಬುವುದಾಗಿ ಹೇಳಿದ್ದಾರೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ