Share this news

ಚಿಕ್ಕಬಳ್ಳಾಪುರ : ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷದಿಂದ ಕೆ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ಕೊಡಲಿ ಸ್ಪರ್ಧೆ ಮಾಡುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯ ಗೆಲುವಿನಂತೆ ಲೋಕಸಭೆ ಚುನಾವಣೆಯಲ್ಲೂ ಗೆದ್ದು ಬರುತ್ತೇನೆ ಎನ್ನುವ ಮೂಲಕ ಮತ್ತೊಮ್ಮೆ ಮಾಜಿ ಸಚಿವ ಸುಧಾಕರ್ ವಿರುದ್ಧ ಹರಿಹಾಯ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಪಕ್ಷದ ಪ್ರಭಾವಿ ನಾಯಕರಾಗಿದ್ದ ಡಾ ಕೆ ಸುಧಾಕರ್ ವಿರುದ್ಧ ಸ್ಪರ್ಧಿಸಿದ್ದ ಪ್ರದೀಪ್ ಈಶ್ವರ್‌ ಬಗ್ಗೆ ಮೊದಲಿಗೆ ಲಘುವಾಗಿ ಕಂಡಿದ್ದ ಬಿಜೆಪಿ ನಾಯಕರು. ಚುನಾವಣೆ ಪ್ರಚಾರದ ವೇಳೆ ಪ್ರದೀಪ್ ಈಶ್ವರ್ ಗೆಲ್ಲೋದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಲಾಗಿತ್ತು. ಆದರೆ ಚುನಾವಣೆ ಫಲಿತಾಂಶ ದಿನ ಡಾ.ಕೆ ಸುಧಾಕರ್ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಶಾಕ್ ನೀಡಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲೂ ಇಬ್ಬರು ನಾಯಕರು ಮತ್ತೆ ಮುಖಾಮುಖಿಯಾಗುತ್ತಾರೆಯೇ ಎನ್ನುವುದು ಸಧ್ಯದ ಕುತೂಹಲ.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *