Share this news

ಕಾರ್ಕಳ : ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಸ್ಮರಣೆಯನ್ನು ವಿಕಾಸ ಕಚೇರಿಯಲ್ಲಿ ಆಚರಿಸಲಾಯಿತು.

ಕಾರ್ಕಳ ತಾಲೂಕು ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ, ಯವರು ಅಂಬೇಂಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಭಾರತಿಯರಾದ ನಾವು ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ಪುಷ್ಟಿ ನೀಡುವಲ್ಲಿ ಕೈ ಜೋಡಿಸಿ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಮತ್ತು ಹೋರಾಟವನ್ನು ಮುಂಬರುವ ತಲೆಮಾರಿನವರಿಗೆ ತಿಳಿಸಿಕೊಡಬೇಕಾಗಿದೆ. ಭಾರತದ ಸಂವಿಧಾನವನ್ನು ಶ್ರೇಷ್ಠ ಸಂವಿಧಾನವನ್ನಾಗಿಸಿದ ಸಂವಿಧಾನ ಶಿಲ್ಪಿಗೆ ನಾವೆಲ್ಲರೂ ತಲೆ ಬಾಗಬೇಕು ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್,ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸಂಜೀವ ಮಾಳ, ಪ್ರಧಾನ ಕಾರ್ಯದರ್ಶಿ ಸತೀಶ್‌ ಪೂಜಾರಿ, ಪ್ರವೀಣ್‌ ಸಾಲ್ಯಾನ, ನಿರಂಜನ್‌ ಜೈನ್‌, ಶ್ರೀನಿವಾಸ್‌ ಕಾರ್ಲ, ತಾಲೂಕು ಯುವಮೋರ್ಚಾದ ಸದಸ್ಯರು ಉಪಸ್ಥಿತರಿದ್ದರು.

 

 

 

 

 

 

 

 

 

 

Leave a Reply

Your email address will not be published. Required fields are marked *