ಕಾರ್ಕಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಸಿಡಿಲು ಬಡಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ನಿತಿನ್ ಪೂಜಾರಿ ಮೃತಪಟ್ಟ ದುರ್ದೈವಿ. ಅವರು ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಕೇಪ್ಲಾಜೆ ಮಾರಿಗುಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದಾಗ ಏಕಾಎಕಿ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಕಾರ್ಕಳ ತಾಲೂಕಿನಾದ್ಯಂತ ಶನಿವಾರ ಬೆಳಗಿನ ಜಾವ ಗುಡುಗು ಸಹಿತ ಭಾರೀ ಮಳೆಯಾಗಿದ್ದು ವಾತಾವರಣ ತಂಪಾಗಿದೆ.