Share this news

 

ಬೆಂಗಳೂರು:ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹಲವೆಡೆ ಗಾಳಿಯ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರುವ ಸಾಧ್ಯತೆಯಿದೆ.

 

 

 

                        

                          

 

Leave a Reply

Your email address will not be published. Required fields are marked *