ಕಾರ್ಕಳ:ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಲಭ್ಯ ಇರುವ ಎಲ್ಲಾ ಆದಾಯ ಮೂಲಗಳಿಂದ ಸರ್ಕಾರ ಜನರನ್ನು ಎಷ್ಟು ಸುಲಿಗೆ ಮಾಡಿದರೂ ರಾಜಸ್ವ ಸಂಗ್ರಹ ದಿನೇ ದಿನೇ ಕುಸಿಯುತ್ತಿದೆ. ಈ ವರ್ಷದ ತೆರಿಗೆ ಸಂಗ್ರಹಣೆಯಲ್ಲಿ 13 ಸಾವಿರ ಕೋಟಿ ಕೊರತೆ ಸೃಷ್ಟಿಯಾಗಿರುವುದರಿಂದ ರಾಜ್ಯ ಸರ್ಕಾರ ತೆರಿಗೆ ಸಂಗ್ರಹಣೆ ನೆಪದಲ್ಲಿ ಹಗಲು ದರೋಡೆಗೆ ಮುಂದಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ಇಂಧನ ದರ ಇಳಿಕೆಗಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಆದರೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಪೆಟ್ರೋಲ್ ಸೆಸ್ ಇಳಿಕೆ ಮಾಡಿದರೂ ಕರ್ನಾಟಕ ಸರ್ಕಾರ ಮಾತ್ರ ಸೆಸ್ ಇಳಿಕೆ ಮಾಡಿಲ್ಲ.ಬಜೆಟ್ ಗೆ ಮುನ್ನವೇ ಪೆಟ್ರೋಲಿಯಂ ಉತ್ಪನಗಳ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ.
ವೈದ್ಯಶಿಕ್ಷಣ ಸೇರಿದಂತೆ ವೃತ್ತಿ ಶಿಕ್ಷಣ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡಿದ್ದ ಸರ್ಕಾರ ಪೆಟ್ರೋಲಿಗೆ ಬೆಂಕಿ ಹಚ್ಚಿದೆ. ಇದಲ್ಲದೇ ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರು ಉಸಿರಾಡುವ ಗಾಳಿಗೂ ತೆರಿಗೆ ಹಾಕಿದರೂ ಅಚ್ಚರಿಪಡಬೇಕಿಲ್ಲ.
ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯವಾದೀತು ಎಂದು ಸುನಿಲ್ ಕುಮಾರ್
ಎಚ್ಚರಿಸಿದ್ದಾರೆ.