Share this news

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ನಡೆಯಿತು. ಸುಮಾರು 150 ನಿಮಿಷಗಳ ಕಾಲ ಮುಖ್ಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಲಾಯಿತು. ನಂತರ ಸಂಪುಟ ಸಭೆಯ ಅಂತ್ಯದ ವೇಳೆಗೆ ವರ್ಗಾವಣೆಯ ವಿಷಯದ ಬಗ್ಗೆ ಚರ್ಚೆ ನಡೆಯಿತು.

ಅಧಿಕೃತ ವರ್ಗಾವಣೆ ನೀತಿಯನ್ನು ಸರ್ಕಾರ ಶೀಘ್ರವೇ ಅಂತಿಮಗೊಳಿಸಲಿದೆ, ಆದರೆ ಯಾವುದೇ ನಿರ್ಬಂಧಗಳಿಲ್ಲದ ಕಾರಣ ಈಗಲೇ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಕೆಲವು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಆದರೆ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಸಿಎಂ ದೃಢವಾಗಿ ಹೇಳಿದ್ದು, ಕಳೆದ ವರ್ಷ ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ನಕಾರತ್ಮಾತ ಟೀಕೆಗಳು ಬಂದಿದ್ದು, ಈಗ ಆ ವಿಚಾರವನ್ನು ಕೈಗೆತ್ತಿಕೊಳ್ಳದಿರುವುದು ಜಾಣತನ ಎಂದು ಸಚಿವರಿಗೆ ಸಿಎಂ ಎಚ್ಚರಿಕೆ ನೀಡಿದರು. ನಂತರ ಯಾವುದೇ ರೀತಿ ಚರ್ಚೆ ನಡೆಸದೆ ಸಂಪುಟ ಸಭೆಯಿಂದ ಎದ್ದು ಹೊರ ನಡೆದರು.

ಕ್ಲಾಸ್ -1 ಮತ್ತು ಮೇಲಿನ ಅಧಿಕಾರಿಗಳ ವರ್ಗಾವಣೆಯನ್ನು ಸಿಎಂ ನಿರ್ವಹಿಸುತ್ತಾರೆ, ಆದರೆ ಕೆಳ ಹಂತವನ್ನು ಸಚಿವರು ಮತ್ತು ಶಾಸಕರಿಗೆ ಬಿಡಲಾಗುತ್ತದೆ. ಮೇ ಮತ್ತು ಜೂನ್‌ನಲ್ಲಿ ಅಧಿಕೃತ ವರ್ಗಾವಣೆ ಸರ್ವೇ ಸಾಮಾನ್ಯ. ಸುಮಾರು ಶೇ. 6-8 ರಷ್ಟು ಸರ್ಕಾರಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗುತ್ತದೆ. ಈ ವರ್ಷ, ಜೂನ್ 6 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಸರ್ಕಾರವು ವರ್ಗಾವಣೆ ಅರ್ಜಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಚುನಾವಣಾ ಫಲಿತಾಂಶದ ನಂತರ ಅಧಿಕಾರಿಗಳ ವರ್ಗಾವಣೆಗೆ ಭಾರಿ ಒತ್ತಡ ಬಂದಿದೆ. ಕಳೆದ ವರ್ಷ ಕೆಲವು ಇಲಾಖೆಗಳಲ್ಲಿ ಶೇ.6-8ರಷ್ಟು ನಿಯಮ ಮೀರಿ ವರ್ಗಾವಣೆಗಳು ನಡೆದಿತ್ತು. ಅಂದರೆ ಶೇ.20-25ರಷ್ಟು ವರ್ಗಾವಣೆಯಾಗಿತ್ತು. ಹಣಕಾಸಿನ ಲಾಭಕ್ಕಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿತ್ತು

 

 

 

 

                        

                          

 

 

 

 

 

                        

                          

 

 

Leave a Reply

Your email address will not be published. Required fields are marked *