Share this news

ಕಾರ್ಕಳ :ಬೀದಿ ನಾಯಿಗಳ ಕಾಟದಿಂದ ಹೊರಗೆ ಓಡಾಡಲು ಭಯಪಡುತ್ತಿದ್ದ ಕಾರ್ಕಳ ಜನತೆಗೆ ಕಾರ್ಕಳ ಪುರಸಭೆ ಕೊನೆಗೂ ಭಯಕ್ಕೆ ಮುಕ್ತಿ ನೀಡಿದೆ.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಎಚ್ಚೆತ್ತ ಪುರಸಭೆ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕುವ ಅಭಿಯಾನ ಕೈಗೊಂಡಿದ್ದು ಶೇ 80 ರಷ್ಟು ಬೀದಿನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾವಹಿಸಲಿದೆ

ಮುಂಜಾನೆ ವಾಕಿಂಗ್ ಮಾಡುವವರ ಹಾಗೂ ನಡೆದುಕೊಂಡು ಹೋಗುವವರ ಮೇಲೆ ಬೀದಿ ನಾಯಿಗಳ ದಾಳಿ ನಡೆಸಿದ ಪರಿಣಾಮ ಅವುಗಳ ಕಡಿತದಿಂದ ಸಾಕಷ್ಟು ಕಷ್ಟ ಅನುಭವಿಸಿ ಪುರಸಭೆಗೆ ಹಿಡಿಶಾಪ ಹಾಕುತಿದ್ದ ಸಾರ್ವಜನಿಕರು ಈಗ ಕೊಂಚ ನಿರಾಳರಾಗಿದ್ದಾರೆ.
ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವಾರು ಬಾರಿ ಬೀದಿ ನಾಯಿಗಳ ಕಡಿತದಿಂದ ಸಾರ್ವಜನಿಕರಿಗೆ ಆದ ಸಮಸ್ಯೆ ಬಗ್ಗೆ ಚರ್ಚೆಗೆ ಹಾಗೂ ಪ್ರತಿಪಕ್ಷ, ಆಡಳಿತ ಪಕ್ಷದ ಪ್ರಶ್ನೆ ಮತ್ತು ಟೀಕೆಗಳಿಗೆ ಗುರಿಯಾಗಿದ್ದ ಅಧಿಕಾರಿಗಳು ಹಲವಾರು ಬಾರಿ ಬೀದಿನಾಯಿಗಳ ಕಾಟ ತಪ್ಪಿಸಲು ಮಾಡಿದ ಹೋರಾಟ, ಪ್ರಯತ್ನ ಪ್ರಾಣಿ ಪ್ರೇಮಿಗಳು ಹಾಗೂ ಕಾನೂನಿನ ತೊಡಕಿನಿಂದ ಪುರಸಭೆಗೆ ಹಿನ್ನಡೆಯಾಗಿತ್ತು. ಬೀದಿ ನಾಯಿಗಳಿಂದ ತೊಂದರೆ ಅನುಭವಿಸಿದ ಕುಟುಂಬಗಳ ನೋವು ಹಾಗೂ ಸಾರ್ವಜನಿಕರ ಆಕ್ರೋಶದಿಂದ ಪುರಸಭೆ ಅಧಿಕಾರಿಗಳ ನೆಮ್ಮದಿ ಕೆಡುವಂತಾಗಿತ್ತು.
ಪ್ರಮುಖವಾಗಿ ಪ್ರಾಣಿದಯಾ ಸಂಘದವರ ಪ್ರತಿರೋಧದ ನಡುವೆಯೂ ಕಾನೂನಿನ ತೊಡಕನ್ನು ನಿವಾರಿಸಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸುವಲ್ಲಿ ಕಾರ್ಕಳ‌ ಪುರಸಭೆ ಯಶಸ್ವಿಯಾಗಿದೆ. ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಹಾಗೂ ಹಿರಿಯ ಆರೋಗ್ಯ ಅಧಿಕಾರಿ ಲೈಲಾ ಥಾಮಸ್ ಅವರ ನೇತೃತ್ವದಲ್ಲಿ ಕಾರ್ಕಳ ಪುರಸಭೆ ಆಶ್ರಯದಲ್ಲಿ ಕ್ಯಾಪ್ಟನ್ ಅನಿಮಲ್ ಕೇರ್ ಟ್ರಸ್ಟ್ ಮಣಿಪಾಲ ಇದರ ಸಹಯೋಗದೊಂದಿಗೆ ಕಾರ್ಕಳ ನಗರ ವ್ಯಾಪ್ತಿಯ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ರೇಬಿಸ್ ರೋಗ ನಿರೋಧಕ ಲಸಿಕೆಗಳನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾರ್ಯಪ್ರವೃತ್ತವಾಗಿದೆ.
ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಡಂಪಿಂಗ್ ಯಾರ್ಡ್ ಪಕ್ಕದಲ್ಲಿ ಶ್ವಾನಗಳ ಶಸ್ತ್ರಚಿಕಿತ್ಸೆಗಾಗಿ ಪ್ರತ್ಯೇಕ ಶಸ್ತ್ರಚಿಕಿತ್ಸಾ ಕೊಠಡಿ, ಶಸ್ತ್ರಚಿಕಿತ್ಸಾ ಪೂರ್ವ ಕೊಠಡಿ , ಶ್ವಾನಗಳ ಶಸ್ತ್ರಚಿಕಿತ್ಸಾ ನಂತರದ ವಿಶ್ರಾಂತಿ ಕೊಠಡಿ ನಿರ್ಮಿಸಿ , ನುರಿತ ಪಶುವೈದ್ಯರುಗಳಿಂದ ಬೀದಿ ನಾಯಿಗಳ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯಕೀಯ ಆರೋಗ್ಯ ನಡೆಸಿ ಮರಳಿ ತಂದಂತಹ ಜಾಗಗಳಿಗೆ ಬಿಡಲಾಗುತ್ತಿದೆ
ಈಗಾಗಲೇ ಸುಮಾರು 80ರಷ್ಟು ಬೀದಿ ನಾಯಿಗಳನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರ ಬಿಡಲಾಗಿದ್ದು ದಿನವೊಂದಕ್ಕೆ ಸುಮಾರು 20ರಿಂದ 30ರಷ್ಟು ಬೀದಿ ನಾಯಿಗಳ ಶಸ್ತ್ರಚಿಕಿತ್ಸೆ ನಡೆಸಿ 3 ದಿನಗಳ ಶುಶ್ರೂಷೆ ನೀಡಿ ಅವುಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗುತ್ತಿದೆ
ಕ್ಯಾಪ್ಟನ್ ಅನಿಮಲ್ ಕೇರ್ ಟ್ರಸ್ಟ್ ನ ಪಶು ವೈದ್ಯರು , ಪುರಸಭಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಕಾರ್ಕಳ ಪುರಸಭಾ ವ್ಯಾಪ್ತಿಯ 23 ವಾರ್ಡ್ ಗಳಲ್ಲಿ ಬೆಳಗ್ಗಿನ ಜಾವ ಪುರಸಭಾ ವಾಹನಗಳಲ್ಲಿ
ಬೀದಿ ನಾಯಿಗಳನ್ನು ಬಲೆ ಬೀಸಿ ಹಿಡಿದು ಹಾಕಿ ಕರಿಯಕಲ್ಲು ಡಂಪಿಂಗ್ ಯಾರ್ಡ್ ಪಕ್ಕದಲ್ಲಿರುವ ಪುರಸಭಾ ಶ್ವಾನ ಸಂತಾನ ಹರಣ ಶಸ್ತ್ರಚಿಕಿತ್ಸೆ ಕೇಂದ್ರಕ್ಕೆ ತಂದು ಗಂಡು ಹಾಗೂ ಹೆಣ್ಣು ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸುವುದರ ಜೊತೆಗೆ ರೇಬಿಸ್ ಲಸಿಕೆ ಹಾಕಲಾಗುತ್ತಿದೆ ಕಳೆದ ಒಂದು ವಾರದಿಂದ ವಿವಿಧ ವಾರ್ಡ್ ಗಳಿಂದ ಸುಮಾರು ನೂರರಷ್ಟು ಬೀದಿ ನಾಯಿಗಳನ್ನು ಹಿಡಿದು ತಂದು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ವಾರ್ಡುಗಳಲ್ಲಿ ಮುಂಚಿತವಾಗಿಯೇ ಸಾರ್ವಜನಿಕರಿಗೆ ಪುರಸಭೆ ಮಾಹಿತಿ ನೀಡಿ ಸಾಕು ನಾಯಿಗಳನ್ನು ಬೀದಿಗೆ ಬಿಡದಂತೆ ವಿನಂತಿಸಲಾಗುತ್ತದೆ. ಹಿಡಿದ ಬೀದಿ ನಾಯಿಗಳ ಮಾಹಿತಿ ಸಂಖ್ಯೆಗಳನ್ನು ಸ್ಥಳದಲ್ಲೇ ಸಾರ್ವಜನಿಕರಿಗೆ ಆಯಾ ದಿನ ನೀಡುವ ಕೆಲಸ ಕೂಡ ಪುರಸಭೆಯ ಹಿರಿಯ ಆರೋಗ್ಯಾಧಿಕಾರಿ ಲೈಲಾ ಥಾಮಸ್ ಮಾಡುತ್ತಿದ್ದಾರೆ

ನಿರಂತರವಾಗಿ ಸುಮಾರು ಒಂದು ತಿಂಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು ಸುಮಾರು 300 ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸುವ ಗುರಿ ಪುರಸಭೆ ಹೊಂದಿದೆ
ನಾಯಿಯನ್ನು ಹಿಡಿದು ತಂದು ಅವುಗಳ ಆರೈಕೆ, ಶಸ್ತ್ರಚಿಕಿತ್ಸೆ, ಲಸಿಕೆ, ಶಸ್ತ್ರಚಿಕಿತ್ಸೆ ನಂತರ ಮೂರು ದಿನದ ಆರೈಕೆ ಹಾಗೂ ನಾಯಿಗಳನ್ನು ಪುನ ತಮ್ಮ ತಮ್ಮ ಸ್ವಸ್ಥಾನಕ್ಕೆ ಬಿಟ್ಟು ಬಿಡಲು ಪುರಸಭೆ ಪ್ರತಿಯೊಂದು ನಾಯಿಗಳ ಮೇಲೆ 1650 ರೂಪಾಯಿಗಳನ್ನು ವ್ಯಯಿಸುತ್ತಿದ್ದು ಕ್ಯಾಪ್ಟನ್ ಅನಿಮಲ್ ಕೇರ್ ಟ್ರಸ್ಟ್ ಟೆಂಡರ್ ಪಡೆದು ಕೊಂಡು ಪಶು ವೈದ್ಯ ಡಾ. ವಿಜಯ್ ಹಾಗೂ ಅವರ ತಂಡ ಶಸ್ತ್ರಚಿಕಿತ್ಸೆಯ ಜವಾಬ್ದಾರಿ ವಹಿಸಿಕೊಂಡು ಕಾರ್ಕಳ ತಾಲೂಕು ಪಶು ವೈದ್ಯಾಧಿಕಾರಿ ಡಾ. ವಾಸುದೇವ್ ಪೈಯವರ ಮೇಲುಸ್ತುವಾರಿ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ
ಪ್ರತಿ ವರ್ಷ ಕೂಡ ಇದೇ ರೀತಿ ಪುರಸಭೆ ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಸಂಹರಿಸದೆ ಬೀದಿನಾಯಿಗಳ ಸಂಖ್ಯೆ ಹಾಗೂ ಉಪಟಳ ಕಡಿಮೆಗೊಳಿಸುವಲ್ಲಿ ಮಹತ್ತರವಾದ ಪಾತ್ರ ವಹಿಸಲಿದೆ.

ಸಾರ್ವಜನಿಕರಿಗೆ ಬೀದಿನಾಯಿಗಳ ಕಾಟದಿಂದ ಮುಕ್ತಿ ನೀಡುವುದು ನಮ್ಮ ಗುರಿ: ರೂಪಾ ಶೆಟ್ಟಿ, ಮುಖ್ಯಾಧಿಕಾರಿ

ಬೀದಿನಾಯಿಗಳ ಶಸ್ತ್ರಚಿಕಿತ್ಸೆಗಾಗಿ ಪ್ರತ್ಯೇಕ ಶಸ್ತ್ರಚಿಕಿತ್ಸಾ ಕೊಠಡಿ, ಶಸ್ತ್ರಚಿಕಿತ್ಸಾ ಪೂರ್ವ ಕೊಠಡಿ , ಶ್ವಾನಗಳ ಶಸ್ತ್ರಚಿಕಿತ್ಸಾ ನಂತರದ ವಿಶ್ರಾಂತಿ ಕೊಠಡಿಗಳನ್ನು ಪುರಸಭೆಯಿಂದಲೇ ನಿರ್ಮಿಸಿ , ನುರಿತ ಪಶುವೈದ್ಯರುಗಳಿಂದ ಬೀದಿ ನಾಯಿಗಳ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯಕೀಯ ಆರೋಗ್ಯ ನಡೆಸಿ ಮರಳಿ ತಂದಂತಹ ಜಾಗಗಳಿಗೆ ಬಿಡಲಾಗುತ್ತಿದೆ.
ಈಗಾಗಲೇ ಸುಮಾರು 80ರಷ್ಟು ಬೀದಿ ನಾಯಿಗಳನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರ ಬಿಡಲಾಗಿದ್ದು ದಿನವೊಂದಕ್ಕೆ ಸುಮಾರು 20ರಿಂದ 30ರಷ್ಟು ಬೀದಿ ನಾಯಿಗಳ ಶಸ್ತ್ರಚಿಕಿತ್ಸೆ ನಡೆಸಿ 3 ದಿನಗಳ ಶುಶ್ರೂಷೆ ನೀಡಿ ಅವುಗಳ ಚಲನ ವಲನಗಳ ಬಗ್ಗೆ ನಿಗಾವಹಿಸಲಾಗುತ್ತಿದೆ. ಜನರಿಗೆ ಬೀದಿನಾಯಿಗಳ ಕಾಟದಿಂದ ಮುಕ್ತಿ ನೀಡುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಹೇಳಿದ್ದಾರೆ.

ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆಯಿಂದ ಯಾವುದೇ ಸಮಸ್ಯೆಯಿಲ್ಲ: ಡಾ. ವಾಸುದೇವ ಪೈ, ಪಶುವೈದ್ಯಾಧಿಕಾರಿ ಕಾರ್ಕಳ

ಸಂತಾನ ಹರಣ ಶಸ್ತ್ರಚಿಕಿತ್ಸೆಯಿಂದ ನಾಯಿಗಳ ಕಚ್ಚುವ ಗುಣ ಕಡಿಮೆ ಆಗುತ್ತದೆ ಮತ್ತು ಅವುಗಳ ಸಿಟ್ಟು ಕಡಿಮೆಯಾಗುತ್ತದೆ.
ಬೀದಿ ನಾಯಿಗಳನ್ನು ಶಸ್ತ್ರಚಿಕಿತ್ಸೆಗೆ ಮುಂಚಿತವಾಗಿ ಆರೋಗ್ಯ ತಪಾಸಣೆ ನಡೆಸಿ ಗರ್ಭ ಧರಿಸಿದ ನಾಯಿಗಳು, ಮರಿಗಳು ,ಹಾಗೂ ತೀರಾ ನಿಶಕ್ತಿಯಿರುವ ನಾಯಿಗಳನ್ನು ಶಸ್ತ್ರಚಿಕಿತ್ಸೆ ನಡೆಸದೇ ಲಸಿಕೆ ನೀಡಿ ಬಿಡಲಾಗುತ್ತಿದೆ ಹೆಣ್ಣು ಹಾಗೂ ಗಂಡು ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡುವುದರಿಂದ ನಾಯಿಗಳಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎಂದು ಕಾರ್ಕಳ ತಾಲೂಕು ಪಶು ಇಲಾಖೆಯ ವೈದ್ಯಾಧಿಕಾರಿ ಡಾ.ವಾಸುದೇವ ಪೈ ಸ್ಪಷ್ಟಪಡಿಸಿದ್ದಾರೆ

 

 

                        

                          

 

 

 

 

 

                        

                          

 

 

 

 

Leave a Reply

Your email address will not be published. Required fields are marked *