Share this news

ನಂದಳಿಕೆ : ವ್ಯಕ್ತಿ ಕುಸಿದು ಬಿದ್ದು ಸಾವು

ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದ ನಿವಾಸಿಯೊಬ್ಬರು ತಮ್ಮ ಮನೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಂದಳಿಕೆಯ ಅರ್ಜುನಾ (44ವ) ಮೃತಪಟ್ಟವರು.
ಅರ್ಜುನಾ ಅವರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದವರು ಮದ್ಯಾಹ್ನದ ವೇಳೆ ವಾಪಾಸು ಮನೆಗೆ ಬಂದು ಊಟ ಮಾಡಿದ್ದರು. ಬಳಿಕ ತನಗೆ ಹೊಟ್ಟೆನೋವು ಎಂದು ಹೇಳಿದ್ದವರು ಚಿಕಿತ್ಸೆಗೆ ಹೋಗದೆ ಮನೆಯಲ್ಲಿಯೇ ಇದ್ದರು. ಅದೇ ದಿನ ರಾತ್ರಿ ಯಾವುದೋ ಕಾರಣಕ್ಕೆ ಮನೆಯಿಂದ ಹೊರಗೆ ಹೋಗಿದ್ದ ಅವರು ಮನೆಯ ಸಮೀಪದ ತೆಂಗಿನ ಮರದ ಬಳಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಡ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ : ತಾಲೂಕಿನ ಸೂಡಾ ಗ್ರಾಮದ ಬುಟ್ಟಿಮಾರ್ ಕಟ್ಟಿಯಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಸೂಡಾ ನಿವಾಸಿ ಸುರೇಶ (50ವ) ಮೃತಪಟ್ಟವರು. ಅವರು ತಮ್ಮ ಮನೆಯ ಬಳಿಯ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

                        

                          

 

 

 

 

 

                        

                          

 

 

 

 

 

Leave a Reply

Your email address will not be published. Required fields are marked *