ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಅಕ್ರಮವಾಗಿ ಆದಾಯಕ್ಕಿಂತಲೂ ಮಿರಿದ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ತನಿಖೆ ಸಿಬಿಐ ನಡೆಸುತ್ತಿದೆ. ಆದರೆ, ಪುನಃ ಅಧಿಕಾರಕ್ಕೆ ಬಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸರ್ಕಾರದಿಂದ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಮಾಡುತ್ತಿರುವುದನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ನಲ್ಲಿ ಈ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಡಿ.ಕೆ. ಶಿವಕುಮಾರ್ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ನೇತೃತ್ವದ ಪೀಠವು ಡಿ.ಕೆ. ಶಿವಕುಮಾರ್ ಸಲ್ಲಿಕೆ ಮಾಡಿದ್ದ ಮನವಿ ಅರ್ಜಿಯನ್ನು ತಿರಸ್ಕರಿಸಿದೆ. ಈಗಾಗಲೇ ಅಕ್ರಮ ಹಣ ಗಳಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಬಹುಪಾಲು ತನಿಖೆ ಮುಕ್ತಾಯಗೊಂಡಿದ್ದು, ಇನ್ನು ಶೇ.20 ರಷ್ಟು ತನಿಖೆ ಮಾಡುವುದು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆ ಮಾಡಬೇಕಿದೆ ಎಂದು ಸಿಬಿಐ ಹೇಳಿದೆ.
ಈಗ ಸುಪ್ರೀಂ ಕೋರ್ಟ್ನಿಂದ ಅಕ್ರಮ ಆಸ್ತಿ ಗಳಿಕೆಗೆ ಸಂಬAಧಿಸಿದ ಅರ್ಜಿಯನ್ನು ವಜಾಗೊಳಿಸಲು ನಿರಾಕರಣೆ ಮಾಡಿದ್ದರಿಂದ ಪುನಃ ಸಿಬಿಐ ತನಿಖೆ ಎದುರಿಸುವ ಸಾಧ್ಯತೆಯಿದೆ. ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆ ಮಾಡಿದ ಬಳಿಕ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದೆ.














