ಕಾರ್ಕಳ:ಎಸ್.ವಿ.ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ, ಖ್ಯಾತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ಪಿ ಶೆಣೈ, ಕೋಶಾಧಿಕಾರಿ ಐ ರವೀಂದ್ರನಾಥ್ ಪೈ, ವೈ ಆರ್ ನರಸಿಂಹ ಶೆಣೈ, ರಾಜಗೋಪಾಲ್ ಶೆಣೈ, ಅನಂತಕೃಷ್ಣ ಶೆಟ್ಟಿ, ನಿವೃತ್ತ ಪ್ರಾಂಶುಪಾಲರಾದ ಶ್ಯಾಮಲಾ ಕುಮಾರಿ ಬೇವಿಂಜೆ, ರಾಮದಾಸ ಪ್ರಭು, ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ, ಪ್ರೊ. ಉಷಾ ನಾಯಕ್, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಮಾಲಿನಿ ಕೆ, ಬಂಡಿವಡ್ಡರ್,ಕನ್ನಡ ವಿಭಾಗದ ದೇವದಾಸ್ ಕೆರೆಮನೆ ಹಾಗೂ ಎಸ್ ವಿ ಟಿ ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲೆಯ ಚಂದ್ರಿಕಾ ಸ್ವಾಗತಿಸಿದರು. ಕವಿತಾ ವಂದಿಸಿದರು. ಶೈಲಿತ ನಿರೂಪಿಸಿದರು.


























`
