Share this news

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈಗಾಗಲೇ ಸಚಿವ ಸಂಪುಟ ಸಭೆ ನಡೆಸಿ ಪ್ರಾಸಿಕ್ಯೂಷನ್ ಅನುಮತಿಯನ್ನು ಖಂಡಿಸಲಾಗಿತ್ತು. ಈ ಬೆನ್ನಲ್ಲೇ ಇದೀಗ ಇಂದು (ಆಗಸ್ಟ್.22) ಸಂಜೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಬಳಿಕವಶಾಸಕರ ಅಭಿಪ್ರಾಯವನ್ನು ಪಡೆದು, ಆಗಸ್ಟ್.23ರಂದು ಸಿಎಂ ಸಿದ್ಧರಾಮಯ್ಯ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.

ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಸಂವಿಧಾನದ ವಿಧಿ 163 ಅಡಿ ಇರುವ ಅಧಿಕಾರ ಚಲಾಯಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಇದರಡಿ ರಾಜ್ಯಪಾಲರ ಬಳಿ ಬಾಕಿ ಇರುವ ಪ್ರಾಸಿಕ್ಯೂಷನ್ ಅರ್ಜಿಗಳ ವಿಲೇವಾರಿಗೆ ಸಲಹೆ ನೀಡಲಿದೆ ಎನ್ನಲಾಗಿದ್ದು, ಈ ಮೂಲಕ ಬಿಜೆಪಿ, ಜೆಡಿಎಸ್ ನಾಯಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.

 

 

                        

                          

                        

                          

 

`

Leave a Reply

Your email address will not be published. Required fields are marked *