Share this news

ಕುಂದಾಪುರ : ರವಿವಾರ ಸಂಜೆ ವೇಳೆ ಸುರಿದ ಗಾಳಿ-ಮಳೆಗೆ ಮರಗಳು ಬುಡ ಸಹಿತ ಉರುಳಿ ಬಿದ್ದು ಮಹಿಳೆ ಹಾಗೂ ಅವರು ಮನೆಗೆ ಕರೆತರುತಿದ್ದ ದನವೊಂದು ಅದರಡಿ ಸಿಲುಕಿ ಮೃತಪಟ್ಟ ಧಾರುಣ ಘಟನೆ ವಂಡ್ಸೆ ಹೋಬಳಿಯ ಕೆಂಚನೂರು ಗ್ರಾಮದ ಮಲ್ಲಾರಿ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತ ದುರ್ದೈವಿಯನ್ನು ಮಲ್ಲಾರಿಯ ಅಣ್ಣಪ್ಪಯ್ಯ ಎಂಬವರ ಪತ್ನಿ ಸುಜಾತ ಆಚಾರ್ತಿ (53) ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ 5:30ರ ಸುಮಾರಿಗೆ ಮಳೆ ಸುರಿಯತೊಡಗಿದ್ದು, ಸುಜಾತ ಮನೆ ಸಮೀಪದಲ್ಲೇ ಮೇಯಲೆಂದು ಕಟ್ಟಿ ಹಾಕಿದ್ದ ದನವನ್ನು ಬಿಡಿಸಿಕೊಂಡು ಮನೆಗೆ ಮರಳುತಿದ್ದಾಗ 2-3 ಮರಗಳು ಒಟ್ಟಿಗೆ ಅವರ ಮೇಲೆ ಉರುಳಿ ಬಿದ್ದಿದೆ ಎನ್ನಲಾಗಿದೆ.

ಸ್ಥಳೀಯರು ಕೂಡಲೇ ಅವರನ್ನು ಕುಂದಾಪುರದ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

ಮರದಡಿ ಸಿಲುಕಿದ ದನವೂ ಸ್ಥಳದಲ್ಲೇ ಮೃತಪಟ್ಟಿವೆ ಎಂದು ಕುದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ತಿಳಿಸಿದ್ದಾರೆ. ಮೃತರು ಪತಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

                        

                          

                        

                          

 

`

Leave a Reply

Your email address will not be published. Required fields are marked *