Share this news

ಬೆಂಗಳೂರು: ಆಹಾರ ಇಲಾಖೆ ಅಧಿಕಾರಿಗಳು ಮಫ್ತಿಯಲ್ಲಿ ಬೆಂಗಳೂರಿನ ಸ್ಟ್ರೀಟ್ ಫುಡ್ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲನೆ ಮಾಡಿದ ಬೆನ್ನಲ್ಲೇ ಇದೀಗ ರಾಜ್ಯದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲು ಇಲಾಖೆ ಮುಂದಾಗಿದೆ. ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್ ಗಳ ಆಹಾರ ಗುಣಮಟ್ಟ ಪರಿಶೀಲನೆ ಕಾರ್ಯಾಚರಣೆ ನಡೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು. ಅಲ್ಲದೇ ಹಣ್ಣು, ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 266 ಮಾದರಿಗಳಲ್ಲಿ 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡುಬAದಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಅಸುರಕ್ಷಿತವೆಂದು ಕಂಡುಬAದ ಮಾದರಿಗಳಲ್ಲಿ ಕ್ರಿಮಿನಾಶಕಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಫಂಗಸ್ ಬೆಳವಣಿಗೆಯೂ ಪತ್ತೆಯಾಗಿದೆ. 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಣಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

                        

                          

                        

                          

 

`

Leave a Reply

Your email address will not be published. Required fields are marked *